ಬೆಂಗಳೂರು,ಏಪ್ರಿಲ್ 30: ಮುಸ್ಲಿಮ್ ಬಾಂಧವರು ರಮಳಾನ್, ಈದ್ ಎಲ್ಲವನ್ನೂ ಚಂದ್ರ ದರ್ಶನವನ್ನು ಅವಲಂಬಿಸಿ ಆಚರಿಸುತ್ತಿದ್ದಾರೆ. ಇದೀಗ ರಂಜಾನ್ ಕೊನೆಯ ಹಂತಕ್ಕೆ ತಲುಪಿದ್ದು, ರಂಜಾನ್ 29 ನೇ ಉಪವಾಸ ಬಳಿಕ ಶವ್ವಾಲ್ ತಿಂಗಳ ಚಂದ್ರ ದರ್ಶನವಾದಲ್ಲಿ ಮರುದಿನ ಅಥವಾ ಮೇ.2 ರಂದು ಈದ್ ಆಚರಿಸಲಾಗುತ್ತದೆ.ಇದು ಆಯಾ ಮೊಹಲ್ಲಾಗಳ ಖಾಝಿಗಳ ತೀರ್ಮಾನದಂತೆ ನಡೆಯುತ್ತದೆ.
ಆದರೆ, ಇದೀಗ ರಾಜ್ಯ ಸರ್ಕಾರವು ಮೇ.3 ರಂದು ಘೋಷಿಸಿದ್ದ ಈದ್ ಹಬ್ಬ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಚಂದ್ರ ದರ್ಶನ ಸಮಿತಿಯ ತೀರ್ಮಾನದಂತೆ ಮೇ.2 ಕ್ಕೆ ಬದಲಾಯಿಸಲಾಗಿದೆ ಎಂದು ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರವು ನೆಗೋಷಿಯೆಬಲ್ ಇನ್ ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರ, ಮೇ 2, 2022ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ರಮಝಾನ್ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ಚಂದ್ರ ದರ್ಶನ ಸಮಿತಿಯ ಸಭೆಯು ಮೇ 1ರಂದು ಸಂಜೆ 7 ಗಂಟೆಗೆ ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ನೇತೃತ್ವದಲ್ಲಿ ನಗರದ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಸ್ ಬೋರ್ಡ್ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ.
ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಶನಿವಾರ ಅಧಿಸೂಚನೆಯನ್ನು ಹೊರಡಿಸಿ, ರಂಜಾನ್ ಹಬ್ಬದ ಅಂಗವಾಗಿ ಮೇ 3ರಂದು ಮಂಜೂರು ಮಾಡಲಾಗಿದ್ದ ರಜೆಯನ್ನು, ಚಂದ್ರ ದರ್ಶನ ಸಮಿತಿಯ ತೀರ್ಮಾನದಂತೆ ಮೇ 2ರಂದು ಮಂಜೂರು ಮಾಡಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ವಕ್ಸ್ ಬೋರ್ಡ್ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ, ರಂಜಾನ್ ಮಾಸದ 29ನೆ ಉಪವಾಸ ಮುಗಿದ ಬಳಿಕ ಚಂದ್ರ ದರ್ಶನ ಸಮಿತಿ ಸಭೆ ನಡೆಸುವುದು ಸಂಪ್ರದಾಯ. ಅದರಂತೆ, ನಾಳೆ ಸಂಜೆ ಸಭೆ ನಡೆಯಲಿದೆ. ಸರಕಾರದ ಅಧಿಸೂಚನೆಯಲ್ಲಿ ಚಂದ್ರ ದರ್ಶನ ಸಮಿತಿಯ ತೀರ್ಮಾನ ಎಂದು ನಮೂದಿಸಿರುವುದು ಅಚ್ಚರಿ ಉಂಟು ಮಾಡಿದೆ ಎಂದರು.

ಅಧಿಸೂಚನೆ ತಿದ್ದುಪಡಿ
ವಖ್ಫ್ ಅಧ್ಯಕ್ಷರ ಪ್ರತಿಕ್ರಿಯೆಗೆ ಸ್ಪಂದಿಸಿದ ಸರ್ಕಾರ, ಅಧಿಸೂಚನೆಯನ್ನು ತಿದ್ದುಪಡಿಸಿದೆ.
ಮುಸ್ಲಿಂ ಬಾಂಧವರ ಪವಿತ್ರ ಖುತುಬ್-ಎ-ರಂಜಾನ್ ಹಬ್ಬವನ್ನು ಮೇ 2ರಂದು ಆಚರಿಸುವುದಕ್ಕೆ ಮೂನ್ ಕಮಿಟಿಯು ತೀರ್ಮಾನಿಸಿರುವುದರಿಂದ. ಎಂಬುದನ್ನು ಮುಸ್ಲಿಂ ಬಾಂಧವರ ಪವಿತ್ರ ಖುತುಬ್-ಎ-ರಂಜಾನ್ ಹಬ್ಬವನ್ನು ಮೇ 2ರಂದು ಆಚರಿಸುತ್ತಿರುವುದರಿಂದ ರಾಜ್ಯದಲ್ಲಿ ಮೇ.2ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ ಎಂದು ತಿದ್ದುಪಡಿಸಿ ಅಧಿಸೂಚನೆ ಹೊರಡಿಸಿದೆ.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ