ಬೆಳಗಾವಿ: ನಿಮ್ಮನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ ಎರಡೂವರೆ ಸಾವಿರ ಕೋಟಿ ಕೊಡಿ ಎಂದು ದೆಹಲಿಯಿಂದ ಒಂದು ಗ್ಯಾಂಗ್ ನನ್ನ ಬಳಿ ಬಂದಿತ್ತು ಎಂದು ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
2,500 ಕೋಟಿ ರೂ.ಕೊಡಿ ಎಂದು ದೆಹಲಿಯಿಂದ ಬಂದ ಕೆಲವರು ಹೇಳಿದ್ದರು. ಸಿಎಂ ಮಾಡ್ತೀವಿ ಅಂದಿದ್ರು. ನಾನು 2,500 ಕೋಟಿ ರೂ. ಅಂದರೆ ಏನು ಅಂತ ಭಾವಿಸಿದ್ದೀರಿ ಎಂದು ಕೇಳಿದ್ದೆ. ಆ 2,500 ಕೋಟಿ ರೂ. ಹೇಗೆ ಇಡುವುದು? ಕೋಣೆಯಲ್ಲಿ ಇಡುವುದಾ? ಗೋದಾಮಿನಲ್ಲಿ ಇಡುವುದಾ? ಎಂದು ಕೇಳಿದ್ದೆ ಎಂದು ಹೇಳಿದ್ದಾರೆ.
ರಾಜಕಾರಣದಲ್ಲಿ ಯಾರೂ ಅಲ್ಲಿ ಇಲ್ಲಿ ಹೋಗಿ ಹಾಳಾಗಬೇಡಿ. ನಿಮಗೆ ಟಿಕೆಟ್ ಕೊಡಿಸುತ್ತೇವೆ. ದೆಹಲಿ ಕರೆದುಕೊಂಡು ಹೋಗ್ತೀವಿ, ಸೋನಿಯಾ ಗಾಂಧಿ ಭೇಟಿ ಮಾಡಿಸ್ತೀವಿ. ಜೆ.ಪಿ. ನಡ್ಡಾರನ್ನು ಭೇಟಿ ಮಾಡಿಸ್ತೀವಿ ಅಂತಾರೆ. ದೆಹಲಿಯಿಂದ ಒಂದಿಷ್ಟು ಜನ ನನ್ನ ಬಳಿಯೂ ಬಂದಿದ್ದರು. ನಿಮ್ಮನ್ನು ಸಿಎಂ ಮಾಡ್ತೀವಿ 2,500 ಕೋಟಿ ರೂ. ನೀಡಿ ಎಂದು ಹೇಳಿದ್ದರು ಎಂದು ಹೇಳಿದ್ದಾರೆ.
ನಾನು ನಾಟಕ ಮಾಡಿದ್ರೆ ಈಗಲ್ಲ. ಈ ಹಿಂದೆಯೇ ಸಿಎಂ ಆಗಿರುತ್ತಿದ್ದೆ. ಯಡಿಯೂರಪ್ಪಗೆ ಇತ್ತೀಚೆಗೆ ಪುತ್ರ ವ್ಯಾಮೋಹ ಬಂದು ಬಿಟ್ಟಿದೆ ಎಂದು ಮಾಜಿ ಸಿಎಂ ವಿರುದ್ಧ ವೈಮನಸ್ಯವನ್ನು ಹೊರಹಾಕಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ