janadhvani

Kannada Online News Paper

ಹಿಂದುತ್ವ ಸಂಘಟನೆಯಿಂದ ಅಝಾನ್ ವಿರೋಧ- ಕಾಂಗ್ರೆಸ್ ಅಲ್ಪ ಸಂಖ್ಯಾತರ ನಿಯೋಗದಿಂದ ಸಿಎಂ ಭೇಟಿ

ಕೆಲವೊಂದು ಶಕ್ತಿಗಳು ಕೆಲ ವಿಷಯ ಮುಂದಿಟ್ಟುಕೊಂಡು ಅಶಾಂತಿ ಉಂಟು ಮಾಡಲು ಯತ್ನ ಮಾಡುತ್ತಿದ್ದಾರೆ. ಸರ್ಕಾರ ಶಾಂತಿಯುತ ವಾತಾವರಣ ನಿರ್ಮಾಣ ಮಾಡಬೇಕು.

ಆರ್ .ಟಿ. ನಗರ : ರಾಜ್ಯದಲ್ಲಿ ಅಝಾನ್ ಗೆ ವಿರೋಧ ವ್ಯಕ್ತಪಡಿಸಿ ಶ್ರೀ ರಾಮ ಸೇನೆ ಸೇರಿದಂತೆ ಕೆಲವೊಂದು ಹಿಂದುತ್ವ ಸಂಘಟನೆಗಳು ಭಜನೆ ಇತ್ಯಾದಿ ಮೂಲಕ ಅಶಾಂತಿ ಉಂಟು ಮಾಡಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಲ್ಪ ಸಂಖ್ಯಾತರ ನಿಯೋಗ ಸೋಮವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದೆ.

ಸಿಎಂ ಭೇಟಿ ನಂತರ ಅಲ್ಪಸಂಖ್ಯಾತರ ನಿಯೋಗದ ನೇತೃತ್ವ ವಹಿಸಿದ್ದ ಯು. ಟಿ. ಖಾದರ್ ಹೇಳಿಕೆ ನೀಡಿ, ರಾಜ್ಯದಲ್ಲಿ ಬಹುತೇಕ ಎಲ್ಲ ಜನರು ಶಾಂತಿ ಸೌಹಾರ್ದತೆ ನಿರೀಕ್ಷೆ ಮಾಡುತ್ತಿದ್ದಾರೆ. ಕೆಲವೊಂದು ಶಕ್ತಿಗಳು ಕೆಲ ವಿಷಯ ಮುಂದಿಟ್ಟುಕೊಂಡು ಅಶಾಂತಿ ಉಂಟು ಮಾಡಲು ಯತ್ನ ಮಾಡುತ್ತಿದ್ದಾರೆ. ಸರ್ಕಾರ ಶಾಂತಿಯುತ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಸಿಎಂ ಜತೆ ಚರ್ಚೆ ಮಾಡಿದ್ದೇವೆ ಎಂದರು.

ಸಿಎಂ ಕೂಡ ಎಲ್ಲ ರೀತಿಯ ಕ್ರಮ ಕೈಗೊಳ್ಳುವ ಭರವಸೆ ಕೊಟ್ಟಿದ್ದಾರೆ. ಆಜಾನ್ ಬಗ್ಗೆ ಗೃಹ ಸಚಿವರು ಎಲ್ಲಿಯೂ ಹೇಳಿಲ್ಲ. ಆದರೆ ಶಬ್ದ ಮಾಲಿನ್ಯದ ಬಗ್ಗೆ ಕೋರ್ಟ್ ಆದೇಶದಂತೆ ಸರ್ಕಾರದ ನಿಯಮ ರೂಪಿಸಲಿದೆ. ಅದರಂತೆ ಎಲ್ಲರು ಕೂಡ ಪಾಲನೆ ಮಾಡಬೇಕು ಎಂದಿದ್ದಾರೆ ಎಂದು ಖಾದರ್ ಹೇಳಿದ್ದಾರೆ. ನಿಯೋಗದಲ್ಲಿ ಶಾಸಕರಾದ ಎನ್.ಎ.ಹಾರಿಸ್, ನಝೀರ್ ಅಹ್ಮದ್ ಇದ್ದರು.

ಇದನ್ನೂ ಓದಿರಿ...