ಬಾಗಲಕೋಟೆ: ಇದು ರಾಮ ಸೇನೆಯೋ, ರಾವಣ ಸೇನೆಯೋ? ಪ್ರಮೋದ್ ಮುತಾಲಿಕ್ನಂತವರನ್ನು ಒದ್ದು ಒಳಗಡೆ ಹಾಕದೇ ಹೋದರೇ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಶ್ರೀರಾಮ ಸೇನೆ ವಿರುದ್ಧ ಕಿಡಿಕಾರಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಆಝಾನ್ ವರ್ಸಸ್ ಸುಪ್ರಭಾತ ಅಭಿಯಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಂತಹ ವಿಷಯಗಳು ಬೃಹದಾಕಾರವಾಗಿ ಬೆಳೆಯಲು ಸಕಾ೯ರ ಮೌನವಾಗಿ ಒಪ್ಪಿಗೆ ಸೂಚಿಸುವುದನ್ನು ನಿಲ್ಲಿಸಬೇಕು. ಸಮಾಜದ ಸಾಮರಸ್ಯ ಹಾಳಾದ ಮೇಲೆ ರಿಪೇರಿ ಮಾಡಲಿಕ್ಕಾಗುತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಬೆಳಿಗ್ಗೆಯಿಂದ ನೋಡಿದ್ದೇನೆ. ಇದು ರಾಮ ಸೇನೆನೋ, ರಾವಣನ ಸೇನೆನೋ ಇದೊಂದು ಕಡೆ ಇರಲಿ. ಇವತ್ತಿನಿಂದ ಶುರು ಮಾಡಿದ್ದಾರಾ ಹನುಮಾನ ಚಾಲೀಸಾ? ಎಂದು ಪ್ರಶ್ನಿಸಿದ ಅವರು, ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಪ್ರಮಾಣದಲ್ಲಿ ಸ್ಪೀಕರ್ ಇರಲಿ. ಸರ್ಕಾರ ಇದಕ್ಕೆ ಪರ್ಮಿಷನ್ ಕೊಟ್ಟು ಬಿಡಲಿ. ಇದಕ್ಕೇನು ದೊಡ್ಡ ಪ್ರಚಾರದ ಅವಶ್ಯಕತೆ ಇಲ್ಲ ಎಂದರು.
ಹಿಂದುತ್ವ ಉಳಿಸೋಕೆ ಹನುಮಾನ ಚಾಲೀಸಾ ಹೇಳ್ತಿದ್ದಾರೆ ಅಂತ ಏನಿಲ್ಲ. ದಿನಂಪ್ರತಿ ಮನೆಯಲ್ಲಿ ನಾವು ಹೇಳೋಲ್ವೆ. ಏನಾದ್ರೂ ಸಮಸ್ಯೆ ಆದ್ರೆ, ಆರೋಗ್ಯ ತೊಂದರೆ ಆದ್ರೆ ಹನುಮಾನ್ ಚಾಲೀಸಾ ಹೇಳ್ತೀವಿ. ಇದೇನು ದೊಡ್ಡ ಸಾಧನೆ ಏನಲ್ಲ. ಸಮಾಜದಲ್ಲಿ ಬೆಂಕಿ ಇಡತಕ್ಕಂತವರಿದ್ದಾರಲ್ಲ, ಟಿವಿ ಮುಂದೆ ಮಾತನಾಡೋರು ಪ್ರಮೋದ ಮುತಾಲಿಕ್ ಅವ್ಯಾವೋ ಇದ್ದಾವಲ್ಲ. ಮೊದಲು ಇವರನ್ನು ಒದ್ದು ಒಳಗಡೆ ಹಾಕದೇ ಇದ್ದರೆ ರಾಜ್ಯದಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ನೆಲೆಸಲು ಕಷ್ಟ ಎಂದು ಹೇಳಿದರು.
ನಮಗೆ ಇದೆಲ್ಲಾ ಬೇಕಾಗಿಲ್ಲ. ಹೋದ ವರ್ಷದ ಬೆಳೆ ವಿಮೆ ದುಡ್ಡೇ ಬಂದಿಲ್ಲ. ಇದಕ್ಕೆ ನಮ್ಮ ಹೋರಾಟ ಇರಬೇಕು. ಏನು ಗಂಟೆ ಬಾರಿಸಿದರೆ ನಿಮಗೆಲ್ಲಾ ಸಿಕ್ಕಿ ಬಿಡುತ್ತಾ. ಈ ನಡುವೆ 120 ರೂ. ಪೆಟ್ರೋಲ್, 100 ರೂ. ಡಿಸೇಲ್, ಸಾವಿರ ರೂಪಾಯಿ ಗ್ಯಾಸ್ ರೇಟ್ ಆಗಿದೆ. ಈ ಬಗ್ಗೆ ನೀವ್ಯಾರು ಮಾತನಾಡೋಕೆ ರೆಡಿ ಇಲ್ಲ. ಈ ವಿಷಯ ಹಿಡಿದುಕೊಂಡು ನಾವು ಹೊರಟಿದ್ದೇವೆ. ಜನರು ಸಾಯುತ್ತಿದ್ದಾರೆ, ಜನರ ಜೀವನದ ಜತೆ ಆಟ ಆಡಬೇಡಿ. ಇದನ್ನು ಸರಿಪಡಿಸಬೇಕಾಗಿರೋದು ಹೋರಾಟಗಾರರ, ಸಂಘಟನೆಗಳ ಕರ್ತವ್ಯ ಎಂದು ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ