ಮಂಗಳೂರು, ಮೇ 9: ಮನವಿ ನೀಡಲು ಕಚೇರಿಗೆ ಬರುವವರ ಜೊತೆ ಮಾತುಕತೆ ನಡೆಸುವುದು ಸಹಜವಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರು ನಗರ ಕಮಿಷನರೇಟ್ ಕಚೇರಿಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಆತಿಥ್ಯ ನೀಡಲಾಗಿದೆ ಎಂಬ ವಿಚಾರವು ಸಾಮಾಜಿಕ ಜಾಲತಾಣಗಳಲ್ಲಿ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.
ಮಳಲಿ ಮಸೀದಿ ವಿಚಾರವಾಗಿ ಚರ್ಚೆ ಮಾಡಲು ಪ್ರಮೋದ್ ಮುತಾಲಿಕ್ ಕಚೇರಿಗೆ ಬಂದಿದ್ದರು. ಆ ಪ್ರದೇಶವನ್ನು ಪ್ರವೇಶಿಸಲು ಅವರು ಅನುಮತಿ ಕೇಳಿದ್ದರು. ಮುತಾಲಿಕ್ ಮತ್ತವರ ಬೆಂಬಲಿಗರು ಮಳಲಿಗೆ ಭೇಟಿ ನೀಡುತ್ತಾರೆ ಅನ್ನುವ ಮಾಹಿತಿ ಇತ್ತು. ಮುತಾಲಿಕ್ ಅಲ್ಲಿಗೆ ಹೋದರೆ ಅಹಿತಕರ ಘಟನೆ ಉಂಟಾಗುವ ಸಂಭವ ಇತ್ತು. ಹಾಗಾಗಿ ಅವರಿಗೆ ಪ್ರವೇಶ ನಿರಾಕರಿಸಲಾಗಿತ್ತು ಎಂದು ಕಮಿಷನರ್ ತಿಳಿಸಿದ್ದಾರೆ.
ಅಪರಾಹ್ನ 2:30ರ ವೇಳೆಗೆ ಅವರು ಕಚೇರಿಗೆ ಆಗಮಿಸಿದ್ದರು. ನಾವು ಕಚೇರಿಯಿಂದ ಹೊರಡುವ ಸಮಯದಲ್ಲಿ ಆ ಫೋಟೋ ಕ್ಲಿಕ್ಕಿಸಲಾಗಿತ್ತು ಇದನ್ನೇ ನಿರ್ದಿಷ್ಟ ಪಕ್ಷ, ಸಂಘಟನೆಗೆ ಸೇರಿದವರು ಅಪಪ್ರಚಾರ ಮಾಡಿದ್ದಾರೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದರು.
ಸಾಂದರ್ಭಿಕ ಚಿತ್ರವನ್ನು ತಪ್ಪಾಗಿ ಬಿಂಬಿಸಲಾಗಿದೆ. ಇದನ್ನು ಶೇರ್ ಮಾಡಿದವರು ಪ್ರತಿನಿಧಿಸುವ ಪಕ್ಷದ ಪದಾಧಿಕಾರಿಗಳು ಇಲ್ಲಿಗೆ ಆಗಮಿಸುತ್ತಾರೆ ಎಂದು ಕಮಿಷನರ್ ಪ್ರತಿಕ್ರಿಯಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ