ಮಂಗಳೂರು, ಮೇ 9: ಮನವಿ ನೀಡಲು ಕಚೇರಿಗೆ ಬರುವವರ ಜೊತೆ ಮಾತುಕತೆ ನಡೆಸುವುದು ಸಹಜವಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರು ನಗರ ಕಮಿಷನರೇಟ್ ಕಚೇರಿಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಆತಿಥ್ಯ ನೀಡಲಾಗಿದೆ ಎಂಬ ವಿಚಾರವು ಸಾಮಾಜಿಕ ಜಾಲತಾಣಗಳಲ್ಲಿ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.
ಮಳಲಿ ಮಸೀದಿ ವಿಚಾರವಾಗಿ ಚರ್ಚೆ ಮಾಡಲು ಪ್ರಮೋದ್ ಮುತಾಲಿಕ್ ಕಚೇರಿಗೆ ಬಂದಿದ್ದರು. ಆ ಪ್ರದೇಶವನ್ನು ಪ್ರವೇಶಿಸಲು ಅವರು ಅನುಮತಿ ಕೇಳಿದ್ದರು. ಮುತಾಲಿಕ್ ಮತ್ತವರ ಬೆಂಬಲಿಗರು ಮಳಲಿಗೆ ಭೇಟಿ ನೀಡುತ್ತಾರೆ ಅನ್ನುವ ಮಾಹಿತಿ ಇತ್ತು. ಮುತಾಲಿಕ್ ಅಲ್ಲಿಗೆ ಹೋದರೆ ಅಹಿತಕರ ಘಟನೆ ಉಂಟಾಗುವ ಸಂಭವ ಇತ್ತು. ಹಾಗಾಗಿ ಅವರಿಗೆ ಪ್ರವೇಶ ನಿರಾಕರಿಸಲಾಗಿತ್ತು ಎಂದು ಕಮಿಷನರ್ ತಿಳಿಸಿದ್ದಾರೆ.
ಅಪರಾಹ್ನ 2:30ರ ವೇಳೆಗೆ ಅವರು ಕಚೇರಿಗೆ ಆಗಮಿಸಿದ್ದರು. ನಾವು ಕಚೇರಿಯಿಂದ ಹೊರಡುವ ಸಮಯದಲ್ಲಿ ಆ ಫೋಟೋ ಕ್ಲಿಕ್ಕಿಸಲಾಗಿತ್ತು ಇದನ್ನೇ ನಿರ್ದಿಷ್ಟ ಪಕ್ಷ, ಸಂಘಟನೆಗೆ ಸೇರಿದವರು ಅಪಪ್ರಚಾರ ಮಾಡಿದ್ದಾರೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದರು.
ಸಾಂದರ್ಭಿಕ ಚಿತ್ರವನ್ನು ತಪ್ಪಾಗಿ ಬಿಂಬಿಸಲಾಗಿದೆ. ಇದನ್ನು ಶೇರ್ ಮಾಡಿದವರು ಪ್ರತಿನಿಧಿಸುವ ಪಕ್ಷದ ಪದಾಧಿಕಾರಿಗಳು ಇಲ್ಲಿಗೆ ಆಗಮಿಸುತ್ತಾರೆ ಎಂದು ಕಮಿಷನರ್ ಪ್ರತಿಕ್ರಿಯಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ