ಪಾಲಕ್ಕಾಡ್,ಮೇ.16| ಕಾಂಞಿರಪ್ಪುಝ ಕಲ್ಲಾಂಕುಝಿಯಲ್ಲಿ ಇಬ್ಬರು ಸುನ್ನಿ ಕಾರ್ಯಕರ್ತರನ್ನು ಹತ್ಯೆ ನಡೆಸಿದ ಎಲ್ಲಾ 25 ಅಪರಾಧಿಗಳಿಗೆ ಎರಡು ಜೀವಾವಧಿ ಶಿಕ್ಷೆ ಮತ್ತು ತಲಾ 50,000 ರೂ ದಂಡ.
ಪಾಲಕ್ಕಾಡ್ ಜಿಲ್ಲಾ ನ್ಯಾಯಾಂಗ ತ್ವರಿತ ನ್ಯಾಯಾಲಯದ ನ್ಯಾಯಾಧೀಶರು ಶಿಕ್ಷೆ ವಿಧಿಸಿದ್ದಾರೆ. ಹತ್ಯೆ ನಡೆದು ಏಳು ವರ್ಷಗಳ ನಂತರ, ಫೆಬ್ರವರಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಪ್ರಾರಂಭಿಸಲಾಗಿತ್ತು
2013ರ ನವೆಂಬರ್ 20ರಂದು ರಾತ್ರಿ 9 ಗಂಟೆ ಸುಮಾರಿಗೆ ಶಸ್ತ್ರಧಾರಿಗಳ ತಂಡವೊಂದು ದಿವಂಗತ ಮಹಮ್ಮದ್ ಹಾಜಿಯವರ ಮಕ್ಕಳಾದ ಕುಂಞಿ ಹಂಝ ಮತ್ತು ನೂರುದ್ದೀನ್ ಅವರನ್ನು ಕಲ್ಲಂಕುಝಿಯಲ್ಲಿ ಅವರ ಮನೆಯಲ್ಲಿ ಕಡಿದು ಹತ್ಯೆ ಮಾಡಿತ್ತು. ಮತ್ತೋರ್ವ ಸಹೋದರ ಕುಂಞಿಮುಹಮ್ಮದ್ ಕೂಡ ದಾಳಿಯಲ್ಲಿ ಗಾಯಗೊಂಡಿದ್ದರು. ಘಟನೆಯಲ್ಲಿ ಪೊಲೀಸರು ಬಂಧಿಸಿದ ಎಲ್ಲ 26 ಮಂದಿಯೂ ಮುಸ್ಲಿಂ ಲೀಗ್ ಕಾರ್ಯಕರ್ತರಾಗಿದ್ದಾರೆ.
ಪ್ರಕರಣದಲ್ಲಿ 27 ಆರೋಪಿಗಳಿದ್ದರು. ಅವರಲ್ಲಿ ಒಬ್ಬರು ತೀರಿ ಹೋದರು. ಮತ್ತೊಬ್ಬ ಆರೋಪಿ ಅಪ್ರಾಪ್ತನಾಗಿದ್ದಾನೆ. ಕಾಂಜಿರಪುಝ ಪಂಚಾಯತ್ ಉಪಾಧ್ಯಕ್ಷರಾಗಿದ್ದ ಚೋಳತ್ತಿಲ್ ಸಿದ್ದಿಕ್ ಮೊದಲ ಆರೋಪಿ.
ಬಂಧನದ ಬೆನ್ನಲ್ಲೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಆರೋಪಿಗಳು ಮುಸ್ಲಿಂ ಲೀಗ್ ನಾಯಕರ ಜೊತೆಗೆ ತೆಗೆದುಕೊಂಡ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಆರೋಪಿಗಳಿಗೆ ರಾಜಕೀಯ ನೆರವು ಸಿಗುತ್ತಿದೆ ಎಂಬ ಆರೋಪವೂ ಕೇಳಿ ಬಂದಿತ್ತು. ಜಾಮೀನಿನ ಮೇಲೆ ಹೊರಬಂದ ಆರೋಪಿಗಳು ಪದೇ ಪದೇ ಸಾಕ್ಷಿಗಳಿಗೆ ಬೆದರಿಕೆ ಹಾಕಿ ಪ್ರಕರಣವನ್ನು ಬುಡಮೇಲು ಗೊಳಿಸಲು ಯತ್ನಿಸುತ್ತಿದ್ದರು. ಇದರ ಬೆನ್ನಲ್ಲೇ ಹೈಕೋರ್ಟ್ ಐವರು ಆರೋಪಿಗಳ ಜಾಮೀನು ರದ್ದುಗೊಳಿಸಿತ್ತು.
ಪ್ರಕರಣದ ವಿಚಾರಣೆಯು ವಿಳಂಬಗೊಳ್ಳುತ್ತಿರುವುದರಿಂದ ಸಂತ್ರಸ್ತರ ಕುಟುಂಬಸ್ಥರು ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆಗ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿತು. ಪ್ರಕರಣದಲ್ಲಿ ಸುಮಾರು 90 ಸಾಕ್ಷಿಗಳಿದ್ದರು.
ನೂರುದ್ದೀನ್ ಎಸ್ ವೈಎಸ್ ಕಲ್ಲಂಕುಝಿ ಘಟಕದ ಕಾರ್ಯದರ್ಶಿಯಾಗಿದ್ದರು. ಆರೋಪಿಗಳನ್ನು ರಕ್ಷಿಸಲು ಒತ್ತಡ ಹೇರಿದ್ದರೂ ಜನರ ನಡುವೆ ತೀವ್ರ ಪ್ರತಿಭಟನೆಗಳು ನಡೆದಾಗ ಆರೋಪಿಗಳನ್ನು ಬಂಧಿಸಲು ಮುಂದಾಗಿದ್ದರು. ಕುಂಞಿ ಹಂಝ ಅವರು ಕಲ್ಲಂಕುಝಿಯ ಸುನ್ನೀ ಜುಮುಆ ಮಸೀದಿಯಲ್ಲಿ ‘ತನಲ್’ ಎಂಬ ಸಂಘಟನೆಯು ಅಕ್ರಮವಾಗಿ ಹಣ ಸಂಗ್ರಹಿಸುವುದರ ವಿರುದ್ಧ ವಕ್ಫ್ ಮಂಡಳಿಯಿಂದ ತೀರ್ಪು ಪಡೆದಿದ್ದರು. ಇದರ ಹಿಂದಿನ ವೈಷಮ್ಯವಾಗಿತ್ತು ಹತ್ಯೆಗೆ ಕಾರಣ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ