ಇತ್ತೀಚೆಗೆ ಜಿಲ್ಲೆಯ ನಿರ್ಧಿಷ್ಟ ಪ್ರದೇಶದಲ್ಲಿ ಮತ್ತು ಕೊಡಗಿನಲ್ಲಿ ಸಂಘಟನೆಯ ಕಾರ್ಯಕರ್ತರಿಗೆ ಅಕ್ರಮವಾಗಿ ಶಸ್ತ್ರಾಸ್ತ್ರ ತರಬೇತಿ ನೀಡಿದ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿದೆ ಮತ್ತು ಹಲವೆಡೆ ಸಾರ್ವಜನಿಕ ಸಭೆಗಳಲ್ಲಿ ತ್ರಿಶೂಲ ವಿತರಣೆ ಮಾಡಲಾಗಿದೆ.
ಕಾನೂನಾತ್ಮಕವಾಗಿ ಇದು ಭಾರತದ ಆಯುಧ ಕಾಯ್ದೆಯ ಅಡಿಯಲ್ಲಿ ಗಂಭೀರ ಅಪರಾಧ ಕೃತ್ಯ. ಆದರೆ ಇದು ಸರಕಾರಿ ಪ್ರಾಯೋಜಿತ ಕೃತ್ಯದಂತೆ ಕಾಣುತ್ತದೆ. ಸಂಘಟನೆಗಳ ಕಾರ್ಯಕರ್ತರನ್ನು ಅನ್ಯ ಮತೀಯರ ವಿರುದ್ಧ ಛೂ ಬಿಟ್ಟು ಕೋಮು ಗಲಭೆ ಸೃಷ್ಟಿಸುವುದು ಸಂಘೀ ನಿಕೇತನಿಗಳ ವ್ಯವಸ್ಥಿತ ಷಡ್ಯಂತ್ರ ಇದಾಗಿದೆ.
ಸಿ. ಟಿ.ರವಿ ಇಂತಹ ತರಬೇತಿ ಗಳಲ್ಲಿ ತಪ್ಪೇನಿದೆ ಎಂದು ಕೃಪಾ ಲಿಖಿತ ಹೇಳಿಕೆಯಂತೆಯೆ ಪ್ರಶ್ನಿಸಿದ್ದಾರೆ. ಹಿಂದುಳಿದ ವರ್ಗಗಳ, ದಲಿತರ, ಪರಿಶಿಷ್ಟರ ಯುವಕರನ್ನು ವಿದ್ವಂಸಕ ಕೃತ್ಯಗಳಿಗೆ ಇಳಿಸಿ ತಾನು ಮತ್ತು ವೈದಿಕ ಮೇಲ್ವರ್ಗ ಅಧಿಕಾರ ಪಡೆಯಲಿದೆ.
ಸಿ.ಟಿ.ರವಿಗೆ ತಾಕತ್ತು ಇದ್ದರೆ, ಹಿಂದುಳಿದ ವರ್ಗಗಳ, ದಲಿತರ, ಪರಿಶಿಷ್ಟರ ಮತ್ತು ಬುಡಕಟ್ಟು ಜನಾಂಗದವರನ್ನು ಹಿಂದೂಗಳು ಎಂದು ಪರಿಗಣಿಸಿ, ಅವರಿಗೆ ಶಸ್ತ್ರಾಸ್ತ್ರ ತರಭೇತಿ ಬದಲು ಗುರುಕುಲ ವ್ಯವಸ್ಥೆಯಲ್ಲಿ ವೇದ, ಉಪನಿಷತ್, ಪುರಾಣಗಳ ಭೋಧನೆ ನೀಡಿ ಪಂಡಿತ ಪ್ರಾವೀಣ್ಯತೆ ನೀಡುವ ವ್ಯವಸ್ಥೆ ಮಾಡಲಿ. ಆಗ ತಾನು ಪ್ರತಿಪಾದಿಸುವ ಹಿಂದುತ್ವಕ್ಕೆ ಸ್ವಲ್ಪವಾದರೂ ನ್ಯಾಯ ಲಭಿಸಬಹುದು.
ಕೆ.ಅಶ್ರಫ್
ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ