ಮಂಗಳೂರು: ಕೇಂದ್ರ ಹಜ್ ಮಂಡಳಿಯು ಈಗಾಗಲೇ ವಿವಿಧ ಕಾರಣಗಳನ್ನು ಮುಂದಿಟ್ಟು,ಮಂಗಳೂರು ನಿರ್ಗಮಿತ ಹಜ್ ವಿಮಾನಗಳನ್ನು ರದ್ದುಗೊಳಿಸಿದ್ದು, ಇದರಿಂದಾಗಿ ದ.ಕ, ಉಡುಪಿ, ಕಾರವಾರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹಜ್ ಯಾತ್ರಾರ್ಥಿಗಳಿಗೆ ತೀವ್ರ ಅನಾನುಕೂಲವಾಗಿದೆ.
ಕರಾವಳಿ ಜಿಲ್ಲೆಗಳಲ್ಲಿನ ಹಜ್ ಸಂಬಂಧಿತ ವಿಷಯಗಳು ಅತ್ಯಂತ ಮಹತ್ವವಾಗಿದ್ದು, ಕೇಂದ್ರ ಸರಕಾರದ ಮಂಗಳೂರು ನಿರ್ಗಮಿತ ಹಜ್ ವಿಮಾನಗಳನ್ನು ರದ್ದುಗೊಳಿಸಿ ಬೆಂಗಳೂರು ಮುಖಾಂತರ ಯಾತ್ರಾರ್ಥಿಗಳನ್ನು ಕಳುಹಿಸುವುದು, ಹಜ್ ಆಕಾಂಕ್ಷಿಗಳ ಸಂಖ್ಯೆಯನ್ನು ಆಧರಿಸಿ ನೋಡುವುದಾದರೆ, ಕೇಂದ್ರ ಸರ್ಕಾರದ ಈ ನಿಲುವು ಅನ್ಯಾಯ ಆಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಪರಿಗಣನಾತ್ಮಕ ಮತ್ತು ವ್ಯವಸ್ಥಿತ ಮುಸ್ಲಿಮ್ ವಾಸ್ತವ್ಯ, ಧಾರ್ಮಿಕ ಕೇಂದ್ರಗಳು, ಘಾಡ ಆರಾಧನ ರೂಡಿತ್ವ ಮತ್ತು ಯಾತ್ರಾ ಇತಿಹಾಸ ವನ್ನು ಅವಲೋಕಿಸುವು ದಾದರೆ, ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ನಗರದ ಉನ್ನತೀಕರಣ, ಮೂಲಭೂತ ಸೌಕರ್ಯ, ಸಂಪರ್ಕ ಲಭ್ಯತೆಯನ್ನು ಪರಿಗಣಿಸಿ ಮಂಗಳೂರು ಕೇಂದ್ರಿತ ಹಜ್ ಯಾತ್ರಾರ್ಥಿಗಳ ನಿರ್ಗಮಿತ ವ್ಯವಸ್ತೆಯನ್ನು ಕೇಂದ್ರ ಹಜ್ ಮಂಡಳಿ ರದ್ದುಗೊಳಿಸಬಾರದಿತ್ತು.ಇಷ್ಟೆಲ್ಲಾ ಸಂಪರ್ಕ ಸೌಕರ್ಯ ಗಳಿದ್ದು ಕೂಡಾ ವಿಮಾನ ರದ್ದು ಗೊಳಿಸಿದ್ದು ಖೇದಕರ, ಅನ್ಯಾಯ ಮತ್ತು ಖಂಡನೀಯ.
ಮಂಗಳೂರು ಕೇಂದ್ರಿತ ಹಜ್ ನಿರ್ಗಮನ ಕೇಂದ್ರದ ಭಾಗವಾಗಿ ಈ ಹಿಂದಿನ ಅವಧಿಯಲ್ಲಿ ಕರ್ನಾಟಕ ರಾಜ್ಯ ಸರಕಾರ ಮಂಗಳೂರಿಗೆ ಹಜ್ ಭವನ ನಿರ್ಮಾಣಕ್ಕೆ ಬಡ್ಜೆಟ್ ನಲ್ಲಿ ಪರಿಗಣನಾತ್ಮಕ ನಿಧಿಯನ್ನು ಕೂಡಾ ಬಿಡುಗಡೆ ಗೊಳಿಸಿದೆ. ಹಾಗಿದ್ದೂ ಕೂಡಾ ವಿಮಾನ ರದ್ದು ಪಡಿಸಿರುವುದು ಅತೀವ ಸಂಶಯಕ್ಕೆ ಕಾರಣವಾಗಿದೆ.
ಮುಂದುವರಿದು, ಕರ್ನಾಟಕ ರಾಜ್ಯದ ಸರ್ವ ಸಂಸದರ ನಿಯೋಗ ಆದಷ್ಟೂ ತುರ್ತಾಗಿ ಕೇಂದ್ರ ಹಜ್ ಸಚಿವರಲ್ಲಿ ಈ ಬಗ್ಗೆ ಚರ್ಚಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ನಿರ್ಗಮಿತ ಹಜ್ ವಿಮಾನದ ಏರ್ಪಾಡು ಮಾಡುವಂತೆ ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸಿರುವುದಾಗಿ ಅಧ್ಯಕ್ಷರಾದ ಕೆ.ಅಶ್ರಫ್ (ಮಾಜಿ ಮೇಯರ್) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ