ಮಂಗಳೂರು: ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ ( ಮಾರ್ಕ್ ಸಮ್ ) , ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮೇ 31 ಮತ್ತು ಜೂನ್ 1ರಂದು ಮಂಗಳೂರಿನ ಪುರಭವನದಲ್ಲಿ ಕರ್ನಾಟಕ ರಾಜ್ಯ ಮಟ್ಟದ ಮುಸ್ಲಿಮ್ ಸಮಾವೇಶ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕದ ಮುಸ್ಲಿಮರ ನೋವು ನಲಿವಿನ ಅನಾವರಣದ ಉದ್ದೇಶ ಎಂಬ ಪ್ರಸ್ತಾಪದೊಂದಿಗೆ, ಈ ಸಮಾವೇಶದ ಉದ್ದೇಶ ಜಾತ್ಯಾತೀತತೆ, ಸಬಲೀಕರಣ ಮುನ್ನಡೆ ಎಂಬ ಗುರಿಯಾಗಿದೆ ಎಂದು ಸಂಘಟನೆಯ ಉದ್ದೇಶ ಎಂದು ತಿಳಿಸಲಾಗಿದೆ.
ಸಮಾವೇಶದ ಪೂರ್ವಾಹ್ನ ದ ಗೋಷ್ಠಿಯಲ್ಲಿ,ಕೇರಳದ ಮಾಜಿ ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ. ಕೆ.ಟಿ.ಜಲೀಲ್ ಉದ್ಘಾಟಕರಾಗಿ, ಮುಖ್ಯ ಅತಿಥಿಗಳಾಗಿ ದಲಿತ ಸಂಘಟನೆಯ ಮಾವಳ್ಳಿ ಶಂಕರ್, ಸಾಹಿತಿ ಶ್ರೀಮತಿ ಶರೀಫ, ಕರ್ನಾಟಕ ಸಿ. ಪಿ. ಐ. ಎಂ ನ ಯು.ಬಸವರಾಜು,ದ.ಕ.ಸಿ. ಪೀ. ಐ.ಎಂ ನ ಕೆ. ಯಾದವ ಶೆಟ್ಟಿ.ಹಾಗೂ ಸಭಾಧ್ಯಕ್ಷ ರಾಗಿ ಕರ್ನಾಟಕ ಸಿ. ಪೀ. ಐ.ಎಂ ನ ಸೈಯದ್ ಮುಜೀಬ್,ಮತ್ತು ಪ್ರಾಸ್ತಾವಿಕ ಭಾಷಣ ಕಾರರಾಗಿ ಕರ್ನಾಟಕ ಸಿ.ಪೀ.ಐ.ಎಂ ನ ಮುನೀರ್ ಕಾಟಿಪಳ್ಳ ಭಾಗವಹಿಸಲಿದ್ದಾರೆ.
ಮಧ್ಯಾಹ್ನದ ಗೋಷ್ಠಿಯಲ್ಲಿ,ಕೋಮುವಾದದ ಪ್ರಯೋಗ ಶಾಲೆಯಾಗಿ ಕರ್ನಾಟಕ ಎಂಬ ವಿಷಯದಲ್ಲಿ ಹಂಪಿ ವಿ.ವಿ.ಯ ನಿವೃತ್ತ ಪ್ರಾಧ್ಯಾಪಕರಾದ ಡಾ.ಚಂದ್ರಪೂಜಾರಿ,ಬೆಂಗಳೂರು ರಾಜಕೀಯ ವಿಶ್ಲೇಷಕರಾದ ಡಾ. ಕೆ. ಸತೀಶ್, ಅಧ್ಯಕ್ಷತೆಯಾಗಿ ಮುನೀರ್ ಕಾಟಿಪಳ್ಳ, ನಿರ್ವಹಣೆ ಆಗಿ ಸುನಿಲ್ ಕುಮಾರ್ ಬಜಾಲ್ ಭಾಗವಹಿಸಲಿದ್ದಾರೆ.
ಸಂಜೆ ಗೋಷ್ಠಿಯಲ್ಲಿ ಕರ್ನಾಟಕದ ಮುಸ್ಲಿಮರ ಸ್ಥಿತಿಗತಿ ಎಂಬ ವಿಷಯದಲ್ಲಿ, ಹಿರಿಯ ಪತ್ರಕರ್ತರಾದ ಶ್ರೀ. ಬೀ.ಎಂ . ಹನೀಫ್, ಹೊಸಪೇಟೆ, ಚಿಂತಕರು ಸಾಹಿತಿ ಬರಹಗಾರರು ಆದ ಬೀ.ಪೀರ್ ಪಾಷಾ, ಅಧ್ಯಕ್ಷತೆಯಾಗಿ ಗುಲ್ಬರ್ಗಾ ಹೋರಾಟಗಾರರಾದ ಶ್ರೀಮತಿ ಕೆ.ನೀಲಾ, ನಿರ್ವಹಣೆ ಯಾಗಿ ಡಾ. ಜೀವನ್ ಕುತ್ತಾರ್ ಬಾಗವಹಿಸಲಿದ್ದಾರೆ.
ಸಂಜೆ 7ರಿಂದ ಸಾಂಸ್ಕೃತಿಕ ಕಾರ್ಯಕ್ರಮ ದಫ್, ಮಾಪಿಳ್ಳೆ ಪಾಟ್, ಕವ್ವಾಲಿ ಜರುಗಲಿದೆ. ಮತ್ತು ಜೂನ್ 01 ರಂದು ಆಂತರಿಕ ಕಲಾಪ ಜರುಗಲಿದೆ ಎಂದು ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಮತ್ತು ರಾಜ್ಯ ಸಮಿತಿಯ ಮುನೀರ್ ಕಾಟಿಪಳ್ಳ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ವ್ಯತ್ಯಸ್ಥ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಜ್ಯ ಮುಸ್ಲಿಮ್ ಸಮಾವೇಶ ಆಯೋಜನೆಯು ವಿಶಿಷ್ಟತೆ ಪಡೆಯಲಿದೆ ಎಂದು ಸಂಘಟಕರು ಅಭಿಪ್ರಾಯ ಪಟ್ಟಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ