ಜಮ್ಮು: ಕಠುವಾ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 28ಕ್ಕೆ ಮುಂದೂಡಲಾಗಿದೆ. ಪ್ರಸ್ತುತ ಪ್ರಕರಣದ ವಿಚಾರಣೆಯನ್ನು ಕಠುವಾದಿಂದ ಚಂಡೀಗಢಕ್ಕೆ ವರ್ಗಾಯಿಸಬೇಕು ಎಂದು ಅತ್ಯಾಚಾರ ಸಂತ್ರಸ್ತೆಯ ಅಪ್ಪ ಮನವಿ ಮಾಡಿದ್ದರಿಂದ ವಿಚಾರಣೆಯನ್ನು ಮುಂದೂಡಲಾಯಿತು.
ತಮ್ಮ ಕುಟುಂಬ ಹಾಗೂ ಕೇಸು ವಾದಿಸುತ್ತಿರುವ ವಕೀಲೆಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಅತ್ಯಾಚಾರ ಸಂತ್ರಸ್ಥೆಯ ಅಪ್ಪ ಮನವಿಯಲ್ಲಿ ಹೇಳಿದ್ದಾರೆ. ಈ ಮನವಿ ಬಗ್ಗೆ ಇಂದು ಮಧ್ಯಾಹ್ನ 2 ಗಂಟೆಗೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
ಏತನ್ಮಧ್ಯೆ, ಕೇಸು ವಾದಿಸುತ್ತಿರುವ ತನಗೆ ಜೀವ ಬೆದರಿಕೆ ಇದೆ ಎಂದು ವಕೀಲೆ ದೀಪಿಕಾ ಸಿಂಗ್ ರಜಾವತ್ ಹೇಳಿದ್ದಾರೆ. ಜಮ್ಮುವಿನ ಕಠುವಾದಲ್ಲಿ ಎಂಟರ ಹರೆಯದ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಲ್ಲಿ ಒರ್ವ ಬಾಲಾಪರಾಧಿ ಇದ್ದು, ಆತನಿಗೆ ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಮಕ್ಕಳ ಹಕ್ಕುಗಳ ನಿಯಮ ಪ್ರಕಾರ ಕಠುವಾ ಚೀಫ್ ಜ್ಯುಡಿಷಿಯಲ್ ಮೆಜಿಸ್ಟ್ರೇಟ್ ಈತನ ವಿಚಾರಣೆ ನಡೆಸಲಿದ್ದಾರೆ. ಇನ್ನುಳಿದ ಏಳು ಆರೋಪಿಗಳ ವಿಚಾರಣೆ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಲಿದೆ.
ಈ ಪ್ರಕರಣದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಭುಗಿಲೆದ್ದಿರುವ ಕಾರಣ, ತಟಸ್ಥ ನಿಲುವು ಸ್ವೀಕರಿಸುವುದಕ್ಕಾಗಿ ಜಮ್ಮು ಕಾಶ್ಮೀರ ಸರ್ಕಾರ ಈ ಎರಡೂ ಧರ್ಮಕ್ಕೆ ಸೇರದ ಇಬ್ಬರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ಗಳನ್ನು ನೇಮಕ ಮಾಡಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ