ನವದೆಹಲಿ: ದಕ್ಷಿಣ ದೆಹಲಿಯ ಕಿಡ್ನಿ ದಂಧೆ ಗ್ಯಾಂಗ್ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ದೊಡ್ಡ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸಕರಾಗಿರುವ 34 ವರ್ಷದ ಡಾಕ್ಟರ್ ಪ್ರಿಯಾಂಶ್ ಶರ್ಮಾ ಇಂದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಡಾ. ಶರ್ಮಾ 2007 ರಿಂದ 2013 ರ ನಡುವೆ ಉತ್ತರ ಪ್ರದೇಶದ ಬರೇಲಿಯ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣವನ್ನು ಪಡೆದಿದ್ದಾರೆ. ನಂತರ ಅವರು ಇಟಾವಾ ಜಿಲ್ಲೆಯ ಸೈಫೈನಲ್ಲಿ ತಮ್ಮ ಎಂಎಸ್ ಪದವಿಯನ್ನು ಮುಗಿಸಿದ್ದಾರೆ.
ಆರೋಪಿಗಳು ಹರಿಯಾಣದ ಸೋನಿಪತ್ ಜಿಲ್ಲೆಯ ಗೊಹಾನಾ ನಗರದ ಆಸ್ಪತ್ರೆಯಲ್ಲಿ ಅಕ್ರಮ ಮೂತ್ರಪಿಂಡ ಕಸಿ ಕಾರ್ಯಾಚರಣೆ ನಡೆಸುತ್ತಿದ್ದರು. ಡಾ.ಶರ್ಮಾ ಗ್ಯಾಂಗ್ನ ಮಾಸ್ಟರ್ ಮೈಂಡ್ ಕುಲದೀಪ್ ಜೊತೆ ನೇರವಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಪೊಲೀಸರು ಬುಧವಾರ ದಕ್ಷಿಣ ದೆಹಲಿಯಲ್ಲಿ ಕಿಡ್ನಿ ದಂಧೆ ತಂಡವನ್ನು ಭೇದಿಸಿದ್ದರು ಮತ್ತು ನಗರದ ವಿವಿಧ ಭಾಗಗಳಿಂದ 10 ಜನರನ್ನು ಬಂಧಿಸಿದ್ದರು. ಹೌಜ್ ಖಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಪೊಲೀಸರು ಇದುವರೆಗೆ 11 ಜನರನ್ನು ಬಂಧಿಸಿದ್ದಾರೆ. ಅವರಲ್ಲಿ ಮೂವರು ವೈದ್ಯರು ಮತ್ತು ಇಬ್ಬರು ಲ್ಯಾಬ್ ತಂತ್ರಜ್ಞರು ಮತ್ತು ಉಳಿದವರು ಸಹಾಯಕರು ಇದ್ದಾರೆ. ಸೋನಿಪತ್ನಲ್ಲಿ ಆಪರೇಷನ್ ಥಿಯೇಟರ್ ಸ್ಥಾಪಿಸಲಾಗಿದ್ದು, ಅಲ್ಲಿ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತಿತ್ತು.
ವಿಚಾರಣೆಯ ಸಮಯದಲ್ಲಿ ಬಂಧಿತ ವೈದ್ಯ ಆಪರೇಷನ್ಗಾಗಿ ರೋಗಿಯಿಂದ ಲಕ್ಷ ರೂಪಾಯಿಗಳನ್ನು ವಸೂಲಿ ಮಾಡಿದ್ದಾಗಿ ಬಹಿರಂಗಪಡಿಸಿದ್ದಾರೆ. ಸುಮಾರು 14 ಜನರನ್ನು ಆರು ತಿಂಗಳಿನಿಂದ ಟಾರ್ಗೆಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ವಿಷಯದ ತನಿಖೆ ನಡೆಯುತ್ತಿರುವುದರಿಂದ ಅಂಕಿಅಂಶ ಹೆಚ್ಚಾಗಬಹುದು ಎಂದು ಪೊಲೀಸರು ಹೇಳಿದ್ದಾರೆ.
ವೈದ್ಯರು ಮುಖ್ಯವಾಗಿ ಬಡವರನ್ನು ಗುರಿಯಾಗಿಸಿಕೊಂಡು ಹೆಚ್ಚಿನ ಹಣ ನೀಡುವ ಮೂಲಕ ಆಮಿಷವೊಡ್ಡಿದ್ದಾರೆ ಎನ್ನಲಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ