ಹೊಸದಿಲ್ಲಿ,ಜೂ.5: ಪ್ರವಾದಿ ಮುಹಮ್ಮದ್ ಅವರ ಕುರಿತು ಬಿಜೆಪಿ ನಾಯಕಿ ನೂಪುರ ಶರ್ಮಾ ವಿರುದ್ಧ ಅರಬ್ ದೇಶಗಳು ತೀವ್ರ ಆಕ್ರೋಶಗೊಂಡಿವೆ. ಈಗಾಗಲೇ ಖತರ್ ಸರ್ಕಾರ ಭಾರತೀಯ ರಾಯಭಾರಿಗೆ ಸಮನ್ಸ್ ಹೊರಡಿಸಿದ್ದು,”ಇದಕ್ಕೂ ಭಾರತೀಯ ಸರಕಾರದ ದೃಷ್ಟಿಕೋನಕ್ಕೂ ಯಾವುದೇ ಸಂಬಂಧವಿಲ್ಲ, ಇದೆಲ್ಲ ಒಂದು ಗುಂಪಿನ ದೃಷ್ಟಿಕೋನಗಳು” ಎಂದು ರಾಯಭಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಕತರ್ ಬಳಿಕ ಕುವೈತ್ ಸರಕಾರವು ರವಿವಾರ ಭಾರತದ ರಾಯಭಾರಿಯನ್ನು ಕರೆಸಿಕೊಂಡು ಶರ್ಮಾ ವಿರುದ್ಧ ಸಂಪೂರ್ಣ ತಿರಸ್ಕಾರವನ್ನು ವ್ಯಕ್ತಪಡಿಸಿತಲ್ಲದೆ,ಅಧಿಕೃತ ದೂರು ಪತ್ರವನ್ನೂ ನೀಡಿತು.
ಕುವೈತ್ ಸರಕಾರವು ಭಾರತೀಯ ರಾಯಭಾರಿಯನ್ನು ಕರೆಸಿಕೊಂಡು ತನ್ನ ಅನುಚಿತ ಹೇಳಿಕೆಯಿಂದ ಮುಸ್ಲಿಮ್ ಜಗತ್ತಿನಲ್ಲಿ ಆಕ್ರೋಶವನ್ನು ಸೃಷ್ಟಿಸಿರುವ ಶರ್ಮಾ ವಿರುದ್ಧಅಧಿಕೃತ ದೂರನ್ನು ಸಲ್ಲಿಸಿದೆ.
ಶರ್ಮಾರ ಹೇಳಿಕೆಗಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವ ಬಿಜೆಪಿಯ ನಿರ್ಧಾರವನ್ನು ಕುವೈತ್ ಸರಕಾರವು ಪ್ರಶಂಸಿಸಿದೆ ಎಂದು ವಿದೇಶಾಂಗ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.
ಇರಾನ್ ಆಕ್ರೋಶ
ಇಸ್ಲಾಂ ಧರ್ಮದ ಪ್ರವಾದಿ ವಿರುದ್ಧ ಬಿಜೆಪಿಯ ನಾಯಕರು ನೀಡಿದ ಅವಹೇಳನಕಾರಿ ಹೇಳಿಕೆಗಳ ಕುರಿತು ಇರಾನ್, ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್ ನೀಡಿದೆ.
ಮುಂದಿನ ವಾರ ಇರಾನ್ ವಿದೇಶಾಂಗ ಸಚಿವರು ಹೊಸದಿಲ್ಲಿಗೆ ಮೊದಲ ಬಾರಿಗೆ ಪ್ರವಾಸಕ್ಕೆ ಆಗಮಿಸುವ ಮುಂಚಿತವಾಗಿ ಇರಾನ್ ವಿದೇಶಾಂಗ ಸಚಿವಾಲಯವು ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್ ಹೊರಡಿಸಿದ್ದು, “ಭಾರತೀಯ ಟಿವಿ ಕಾರ್ಯಕ್ರಮದಲ್ಲಿ ಇಸ್ಲಾಂನ ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ”ಯನ್ನು ಉಲ್ಲೇಖಿಸಿದೆ.
ಒಮಾನ್ನ ಗ್ರ್ಯಾಂಡ್ ಮುಪ್ತಿ ಸೇರಿದಂತೆ ಮಧ್ಯಪ್ರಾಚ್ಯದ ಹೆಚ್ಚಿನ ಸಂಖ್ಯೆಯ ಜನರು ಮಧ್ಯಪ್ರಾಚ್ಯ (ಗಲ್ಫ್) ಮಾರುಕಟ್ಟೆಗಳಲ್ಲಿ ಭಾರತೀಯ ಉತ್ಪನ್ನಗಳ ಸಾಮೂಹಿಕ ಬಹಿಷ್ಕಾರಕ್ಕೆ ಕರೆ ನೀಡಿದ್ದರು. ನಂತರ ಹಲವಾರು ಮಾರುಕಟ್ಟೆಗಳಿಂದ ಭಾರತೀಯ ಉತ್ಪನ್ನಗಳನ್ನು ತೆಗೆದುಹಾಕಲಾಗಿತ್ತು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!