ಹೊಸದಿಲ್ಲಿ,ಜೂ.5: ಪ್ರವಾದಿ ಮುಹಮ್ಮದ್ ಅವರ ಕುರಿತು ಬಿಜೆಪಿ ನಾಯಕಿ ನೂಪುರ ಶರ್ಮಾ ವಿರುದ್ಧ ಅರಬ್ ದೇಶಗಳು ತೀವ್ರ ಆಕ್ರೋಶಗೊಂಡಿವೆ. ಈಗಾಗಲೇ ಖತರ್ ಸರ್ಕಾರ ಭಾರತೀಯ ರಾಯಭಾರಿಗೆ ಸಮನ್ಸ್ ಹೊರಡಿಸಿದ್ದು,”ಇದಕ್ಕೂ ಭಾರತೀಯ ಸರಕಾರದ ದೃಷ್ಟಿಕೋನಕ್ಕೂ ಯಾವುದೇ ಸಂಬಂಧವಿಲ್ಲ, ಇದೆಲ್ಲ ಒಂದು ಗುಂಪಿನ ದೃಷ್ಟಿಕೋನಗಳು” ಎಂದು ರಾಯಭಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಕತರ್ ಬಳಿಕ ಕುವೈತ್ ಸರಕಾರವು ರವಿವಾರ ಭಾರತದ ರಾಯಭಾರಿಯನ್ನು ಕರೆಸಿಕೊಂಡು ಶರ್ಮಾ ವಿರುದ್ಧ ಸಂಪೂರ್ಣ ತಿರಸ್ಕಾರವನ್ನು ವ್ಯಕ್ತಪಡಿಸಿತಲ್ಲದೆ,ಅಧಿಕೃತ ದೂರು ಪತ್ರವನ್ನೂ ನೀಡಿತು.
ಕುವೈತ್ ಸರಕಾರವು ಭಾರತೀಯ ರಾಯಭಾರಿಯನ್ನು ಕರೆಸಿಕೊಂಡು ತನ್ನ ಅನುಚಿತ ಹೇಳಿಕೆಯಿಂದ ಮುಸ್ಲಿಮ್ ಜಗತ್ತಿನಲ್ಲಿ ಆಕ್ರೋಶವನ್ನು ಸೃಷ್ಟಿಸಿರುವ ಶರ್ಮಾ ವಿರುದ್ಧಅಧಿಕೃತ ದೂರನ್ನು ಸಲ್ಲಿಸಿದೆ.
ಶರ್ಮಾರ ಹೇಳಿಕೆಗಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವ ಬಿಜೆಪಿಯ ನಿರ್ಧಾರವನ್ನು ಕುವೈತ್ ಸರಕಾರವು ಪ್ರಶಂಸಿಸಿದೆ ಎಂದು ವಿದೇಶಾಂಗ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.
ಇರಾನ್ ಆಕ್ರೋಶ
ಇಸ್ಲಾಂ ಧರ್ಮದ ಪ್ರವಾದಿ ವಿರುದ್ಧ ಬಿಜೆಪಿಯ ನಾಯಕರು ನೀಡಿದ ಅವಹೇಳನಕಾರಿ ಹೇಳಿಕೆಗಳ ಕುರಿತು ಇರಾನ್, ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್ ನೀಡಿದೆ.
ಮುಂದಿನ ವಾರ ಇರಾನ್ ವಿದೇಶಾಂಗ ಸಚಿವರು ಹೊಸದಿಲ್ಲಿಗೆ ಮೊದಲ ಬಾರಿಗೆ ಪ್ರವಾಸಕ್ಕೆ ಆಗಮಿಸುವ ಮುಂಚಿತವಾಗಿ ಇರಾನ್ ವಿದೇಶಾಂಗ ಸಚಿವಾಲಯವು ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್ ಹೊರಡಿಸಿದ್ದು, “ಭಾರತೀಯ ಟಿವಿ ಕಾರ್ಯಕ್ರಮದಲ್ಲಿ ಇಸ್ಲಾಂನ ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ”ಯನ್ನು ಉಲ್ಲೇಖಿಸಿದೆ.
ಒಮಾನ್ನ ಗ್ರ್ಯಾಂಡ್ ಮುಪ್ತಿ ಸೇರಿದಂತೆ ಮಧ್ಯಪ್ರಾಚ್ಯದ ಹೆಚ್ಚಿನ ಸಂಖ್ಯೆಯ ಜನರು ಮಧ್ಯಪ್ರಾಚ್ಯ (ಗಲ್ಫ್) ಮಾರುಕಟ್ಟೆಗಳಲ್ಲಿ ಭಾರತೀಯ ಉತ್ಪನ್ನಗಳ ಸಾಮೂಹಿಕ ಬಹಿಷ್ಕಾರಕ್ಕೆ ಕರೆ ನೀಡಿದ್ದರು. ನಂತರ ಹಲವಾರು ಮಾರುಕಟ್ಟೆಗಳಿಂದ ಭಾರತೀಯ ಉತ್ಪನ್ನಗಳನ್ನು ತೆಗೆದುಹಾಕಲಾಗಿತ್ತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್