ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹಿಜಾಬ್ ಧಾರಿ ಸೋದರಿಯರ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ಬದಲಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದೇನೆ. ಆದರೆ ಆ ಪ್ರತಿಕ್ರಿಯೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ತಿರುಚಿ ಅಪಪ್ರಚಾರ ಮಾಡುವ ಮೂಲಕ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ತಿಳಿಸಿದ್ದಾರೆ.
ಮಾಧ್ಯಮ ಜೊತೆ ಮಾತನಾಡಿದ ಯು.ಟಿ.ಖಾದರ್, ನನ್ನ ಹೇಳಿಕೆಯನ್ನು ತಿರುಚುವ ಮೂಲಕ ಕೆಲವರು ದುರ್ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ವಿಘ್ನ ಸಂತೋಷಿಗಳು ಅವರ ವಿಕೃತ ಮನಸ್ಸನ್ನು ಅನಾವರಣಗೊಳಿಸುತ್ತಿದ್ದಾರೆ. ಹಿಜಾಬ್ ಧಾರಿ ಸಹೋದರಿಯರ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಿಲ್ಲ. ನನ್ನ ಮಗಳೂ ಕೂಡ ಹಿಜಾಬ್ ಧರಿಸುತ್ತಾಳೆ ಎಂಬ ಪ್ರಜ್ಞೆ ನನಗಿದೆ.
ಆದರೆ ಕೆಲವು ಸ್ಥಾಪಿತ ಹಿತಾಸಕ್ತಿಗಳು ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಆ ಸಮಸ್ಯೆಯನ್ನು ಬಗೆಹರಿಸದೆ ಅದನ್ನು ಸದಾಕಾಲ ಜೀವಂತವಾಗಿರಿಸಿ ಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.
ಅಂತಹವರನ್ನು ಗಮನದಲ್ಲಿಟ್ಟುಕೊಂಡ ನಾನು ಈ ದೇಶದ ಕಾನೂನಿಗೆ ಗೌರವ ಕೊಡದೆ ಸಮಸ್ಯೆಯನ್ನು ಸೃಷ್ಟಿಸುವವರು, ಸೌದಿ ಅರೇಬಿಯಾ ಅಥವಾ ಪಾಕಿಸ್ತಾನಕ್ಕೆ ಹೋದಾಗ ಅಲ್ಲಿನ ಕಾನೂನಿನ ಆಳ ಅರಿವು ಆಗುತ್ತದೆ ಮತ್ತು ಭಾರತದ ಕಾನೂನಿನ ಸೌಂದರ್ಯವೂ ತಿಳಿಯಬಹುದಾಗಿದೆ ಎಂದು ಹೇಳಿದ್ದೇನೆಯೇ ವಿನಃ ಹಿಜಾಬ್ ಧಾರಿ ಸಹೋದರಿಯ ಮನಸ್ಸನ್ನು ನೋಯಿಸುವಂತಹ ಯಾವುದೇ ಹೇಳಿಕೆಯನ್ನೂ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)