ಲಾತೂರ್: ಮುಸ್ಲಿಂ ರಾಷ್ಟ್ರಗಳ ಮಾತು ಕೇಳುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಭಾರತದಲ್ಲಿರುವ ಮುಸ್ಲಿಮರ ಮಾತು ಕೇಳುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಬುಧವಾರ ಹೇಳಿದ್ದಾರೆ.
ಪ್ರವಾದಿ ವಿರುದ್ಧ ನೂಪುರ್ ಶರ್ಮಾ ನೀಡಿರುವ ನಿಂದನೆಯ ಹೇಳಿಕೆ ಕುರಿತು ಮಾತನಾಡಿರುವ ಉವೈಸಿ, ಕತಾರ್,ಕುವೈತ್, ಸೌದಿ ಅರೇಬಿಯಾ, ಬಹ್ರೇನ್ನಲ್ಲಿ ವಿರೋಧಗಳು ವ್ಯಕ್ತವಾದ ಬಳಿಕ ಬಿಜೆಪಿ ನೂಪುರ್ ಶರ್ಮಾ ವಿರುದ್ಧ ಕ್ರಮ ಕೈಗೊಂಡಿತು ಎಂದು ಹೇಳಿದ್ದಾರೆ.
ಪ್ರವಾದಿ ವಿರುದ್ಧ ನೂಪುರ್ ಮಾತನಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾವು ಆಗ್ರಹಿಸಿದ್ದೆವು. ಆದರೆ, ಈ ವೇಳೆ ಪ್ರಧಾನಿ ಮೋದಿ ಕಿವಿಕೊಟ್ಟಿರಲಿಲ್ಲ. ಇದೀಗ ಮುಸ್ಲಿಂ ರಾಷ್ಟ್ರಗಳಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಅವರ ವಿರುದ್ಧ ಕ್ರಮ ಕೈಗೊಂಡಿದ್ದಾರೆಂದು ಹೇಳಿದ್ದಾರೆ.
ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ನೂಪುರ್ ಶರ್ಮಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮತ್ತು ಬಿಜೆಪಿ ರಾಷ್ಟ್ರೀಯ ವಕ್ತಾರೆ ಹುದ್ದೆಯಿಂದ ಭಾನುವಾರ ಅಮಾನತುಗೊಳಿಸಲಾಗಿದೆ.
ಹೇಳಿಕೆಗೆ ದೇಶ ಹಾಗೂ ವಿದೇಶಗಳಿಂದ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ನೂಪುರ್ ಶರ್ಮಾ ಅವರು ಈಗಾಗಲೇ ಕ್ಷಮೆಯಾಚಿಸಿದ್ದಾರೆ. ಆದರೂ, ವಿದೇಶಗಳಲ್ಲಿ ಹೇಳಿಕೆಗೆ ವಿರೋಧಗಳು ವ್ಯಕ್ತವಾಗುತ್ತಲೇ ಇವೆ.
ಈ ನಡುವೆ ಭಾರತ ಸರಕಾರ ತನ್ನ ಸಮರ್ಥನೆಗೆ ಸರ್ವ ಪ್ರಯತ್ನ ಮುಂದುವರಿಸಿದ್ದು ತಾನು ಎಲ್ಲಾ ಧರ್ಮಗಳನ್ನೂ ಗೌರವಿಸುತ್ತಿರುವುದಾಗಿ ಹಾಗೂ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ