ಕೆ.ಸಿ.ಎಫ್ ದಮ್ಮಾಮ್ ಝೋನ್ ಸಂಘಟನಾ ವಿಭಾಗದ ಸಹಕಾರದೊಂದಿಗೆ ನಡೆಸಿದ ಕ್ರಿಯೇಟ್ ತರಗತಿ ದಿನಾಂಕ 26 ಮೇ 2022 ಗುರುವಾರ ರಾತ್ರಿ ದಮ್ಮಾಮ್ ಕೆ.ಸಿ.ಎಫ್ ಭವನದಲ್ಲಿ ಬಹಳ ಯಶಸ್ವಿಯಾಗಿ ನಡೆಯಿತು . ದಮ್ಮಾಮ್ ಝೋನ್ ಅಧ್ಯಕ್ಷರಾದ ಫಾರೂಕ್ ಮುಸ್ಲಿಯಾರ್ ಕುಪ್ಪೆಟ್ಟಿ ರವರು ದುಆ ನೆರೆವೇರಿಸಿದರು.
ಸಂಘಟನಾ ವಿಭಾಗದ ಕಾರ್ಯದರ್ಶಿ ಅಶ್ರಫ್ ನಾವುಂದ ತರಗತಿಗೆ ಆಗಮಿಸಿದ ಸರ್ವ ಕಾರ್ಯಕರ್ತರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಕೆ.ಸಿ.ಎಫ್ ರಾಷ್ಟ್ರಿಯ ಸಮಿತಿಯ ಅಧ್ಯಕ್ಷರಾದ ನಝೀರ್ ಹಾಜಿ ಕಾಶಿಪಟ್ನ ರವರು ತರಗತಿಯನ್ನು ಉದ್ಘಾಟಿಸಿದರು. ಲೀಡರ್ಸ್ ಕ್ರಿಯೇಟ್ ಲೀಡರ್ಸ್ ತರಗತಿಯನ್ನು ನಡೆಸಿಕೊಟ್ಟ ಐ.ಸಿ.ಎಫ್ ದಮ್ಮಾಮ್ ಸೆಂಟ್ರಲ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಮಾಸ್ಟರ್ರವರು, ಕಾರ್ಯಕರ್ತರಿಗೆ ಬಹಳಷ್ಟು ಉತ್ತಮ ರೀತಿಯಲ್ಲಿ ಮನುಮುಟ್ಟುವಂತೆ ತಮ್ಮ ಜಬಾಬ್ದಾರಿಗಳನ್ನು ನಿಭಾಯಿಸುವ ಬಗ್ಗೆ ಹಾಗೂ ಸಂಘಟನೆಯ ಬೆಳವಣಿಗೆಗೆ ಬೇಕಾದ ಸವಿವರವಾದ ಮಾಹಿತಿಯನ್ನೊಳಗೊಂಡ ಅತ್ಯುತ್ತಮ ತರಗತಿಯನ್ನು ನಡೆಸಿಕೊಟ್ಟರು.


ಕೆ.ಸಿ.ಎಫ್ ಸೌದಿ ರಾಷ್ಟ್ರಿಯ ಸಮಿತಿಯ ಸಂಘಟನಾ ವಿಭಾಗದ ಅಧ್ಯಕ್ಷರಾದ ಅಬ್ದುಲ್ ರಶೀದ್ ಸಖಾಫಿ ಉಸ್ತಾದರು, ಎಲ್ಲಾ ವಿಂಗ್ ಗಳ ಜವಾಬ್ದಾರಿಗಳೇನು ಎಂಬ ಬಗ್ಗೆ ಕಾರ್ಯಕರ್ತರಿಗೆ ಮನಮುಟ್ಟುವಂತೆ ಉತ್ತಮ ರೀತಿಯಲ್ಲಿ ವಿವರಿಸಿದರು. ಸಂಘಟನಾ ವಿಭಾಗದ ಅಧ್ಯಕ್ಷರಾದ ಪಿ.ಸಿ.ಅಬುಬಕ್ಕರ್ ಸಅದಿ ಉಸ್ತಾದ್ ರವರು, ತರಗತಿಯಲ್ಲಿ ಭಾಗಿಯಾದರೆ ಲಭಿಸುವ ಪ್ರಯೋಜನಗಳೇನು ಹೇಗೆ ಪಡೆಯಬಹುದು ಎನ್ನುವುದನ್ನು ತಿಳಿಸಿಕೊಟ್ಟರು.
ದಮ್ಮಾಮ್ ಝೋನ್ ಅಧ್ಯಕ್ಷರಾದ ಫಾರೂಕ್ ಮುಸ್ಲಿಯಾರ್ ಕುಪ್ಪೆಟ್ಟಿಯವರು ಮಾತನಾಡಿ, ತರಗತಿಯ ಉತ್ತಮ ಸಂದೇಶಗಳನ್ನು ನೆನಪಿಸುತ್ತಾ ದಮ್ಮಾಮ್ ಝೋನಿನ ಕಾರ್ಯಚರಣೆಯಲ್ಲಿ ಎಲ್ಲರೂ ಭಾಗಿಯಾಗಲು ಕರೆ ನೀಡಿದರು.
ಝೋನ್ ಪ್ರ.ಕಾರ್ಯದರ್ಶಿ ತಮೀಮ್ ಕೂಳೂರು ಕ್ಯಾಬಿನೆಟ್ ನಾಯಕರ ಅನಿಸಿಕೆಯನ್ನು ಪಡೆದು, ಭಾಗವಹಿಸಿದ ಎಲ್ಲಾ ನಾಯಕರಿಗೂ ಹಾಗೂ ಕಾರ್ಯರ್ತರಿಗೂ ಧನ್ಯವಾದವನ್ನು ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ