ಬುರೈದ : ದಿನಾಂಕ 11-06-2022 ರಂದು ಉಯುನ್ ಅಲ್ ಜವ ದಲ್ಲಿ ದೇರಳಕಟ್ಟೆ ನಿವಾಸಿ ಇಲ್ಯಾಸ್ ಮತ್ತು ಕುಟುಂಬ ಸಂಚರಿಸುತ್ತಿದ್ದ ವಾಹನ ಪಲ್ಟಿಯಾಗಿ ಅವರ 2 ವರ್ಷ ಪ್ರಾಯದ ಮಗು ಮುಹಮ್ಮದ್ ಸಾದಿನ್ ಸ್ಥಳದಲ್ಲೇ ಮೃತಪಟ್ಟಿತು. ಒಟ್ಟು 6 ಜನರಲ್ಲಿ ಪತ್ನಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿಸ್ಥೆ ಪಡೆಯುತ್ತಿದ್ದಾರೆ.

ಉಳಿದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅಪಘಾತ ಸುದ್ದಿ ತಿಳಿದು ಬುರೈದ ಕರ್ನಾಟಕ ಕಲ್ಚರಲ್ ಫೌಂಡೇಶನ್
(KCF )ನಾಯಕರು ಆಸ್ಪತ್ರೆಗೆ ಧಾವಿಸಿ ಅಗತ್ಯ ನೆರವು ನೀಡಿದರು.
ಮೃತ ಮಗುವಿನ ಅಂತ್ಯಕ್ರಿಯೆಗೆ ಬೇಕಾದ ದಾಖಲೆಗಳನ್ನು Riyad indian emabassy ಸರಿಪಡಿಸಿ ದಿನಾಂಕ 14-06-2022 ರಂದು ಕಿಂಗ್ ಫಹದ್ ಜುಮಾ ಮಸ್ಜಿದ್ ಯಲ್ಲಿ ಮಯ್ಯತ್ ನಮಾಜ್ ನಿರ್ವಹಿಸಿ ಸ್ಥಳೀಯ ಖಬರ್ ಸ್ಥಾನದಲ್ಲಿ ಮಗುವಿನ ಅಂತ್ಯಕ್ರಿಯೆಯನ್ನು ನಡೆಸಲಾಯಿತು. ಇದರಲ್ಲಿ KCF ಬುರೈದ ಸೆಕ್ಟರ್ ಕಾರ್ಯಕರ್ತರು , ಇಲ್ಯಾಸ್ ಕುಟುಂಬಸ್ಥರು , ಸ್ನೇಹಿತರು , ಬಂದು ಮಿತ್ರರು ಸ್ಥಳೀಯರು ಪಾಲ್ಗೊಂಡರು.
ವರದಿ : ಸಾಂತ್ವನ ಇಲಾಖೆ
KCF ಬುರೈದ ಸೆಕ್ಟರ್
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ