ರಾಜ್ಯ ಸರ್ಕಾರದ ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಆದ ಅನ್ಯಾಯದ ವಿರುದ್ಧ ಬೆಂಗಳೂರಿನಲ್ಲಿ ನಡೆಯುವ ಶಾಂತಿಯುತ ಪ್ರತಿಭಟನೆ ಯನ್ನು SSF ರಾಜ್ಯ ಸಮಿತಿ ಸಂಪೂರ್ಣವಾಗಿ ಬೆಂಬಲಿಸಲು SSF ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ನಾಳೆಯ ನಿರೀಕ್ಷೆಗಳಾದ ವಿದ್ಯಾರ್ಥಿಗಳಿಗೆ ಪಠ್ಯದ ಮೂಲಕ ವಿಷವುಣ್ಣಿಸುವ ಹುನ್ನಾರ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ನಡೆದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ನಡೆಸಿದೆ.ಈ ಅಕ್ಷಮ್ಯ ಅಪರಾಧವನ್ನು ಸರ್ಕಾರ ಹಗುರವಾಗಿ ಕಂಡಿದ್ದು ಆತಂಕಕಾರಿ.ಇದರ ವಿರುದ್ಧ ಧರ್ಮ, ಜಾತಿ,ಪಕ್ಷ ಭೇದ ಮನ್ಯೆ ಸಂವಿಧಾನ ಪ್ರ್ರೇಮಿಗಳು ಜೊತೆಯಾಗಿ ಧ್ವನಿ ಎತ್ತಿರುವುದು ಆಶಾದಾಯಕ ಮತ್ತು ಅಭಿನಂದನಾರ್ಹ ವಾಗಿದೆ.
ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಇದೇ ಬರುವ 18ರಂದು ನಡೆಯುವ ಹೋರಾಟದಲ್ಲಿ SSF ಕ್ಯಾಂಪಸ್ ವಿದ್ಯಾರ್ಥಿಗಳು ಸಹಭಾಗಿಯಾಗಲಿದ್ದಾರೆ ಎಂದು ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಶರಿಫ್ ಹೊಸದೋಟ ಪ್ರಸ್ತಾಪಿಸಿದರು. SSFರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಸ್ವಾಗತಿಸಿ, ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ