ಬುರೈದ: ತ್ಯಾಗ, ಬಲಿದಾನಗಳ ಸಂಕೇತವಾದ ಬಲಿ ಪೆರ್ನಾಲ್ ದಿನದಂದು ಬುರೈದ ದಾರುಲ್ ಖ್ಯೆರ್ ನಲ್ಲಿ ಸೇರಿದ ಕರ್ನಾಟಕ ಕಲ್ಚರಲ್ ಪೌಂಡೇಶನ್ ಕೆ.ಸಿ.ಎಫ್ ಅಲ್ ಕಸೀಮ್ ಝೋನ್ ಕಾರ್ಯಕರ್ತರು ಪರಸ್ಪರ ಶುಭಾಶಯ ವಿನಿಮಯ ನಡೆಸಿದರು.
ಈದ್ ಟೂರ್ ಭಾಗವಾಗಿ ಮಧ್ಯಾಹ್ನ ಬುರೈದದಿಂದ ಹೊರಟ ಯಾತ್ರಾ ತಂಡವು ಭೂ ಲೋಕದ ಸ್ವರ್ಗವಾದ ಪುಣ್ಯ ಮದೀನ ಮುನವ್ವರ , ಬದ್ರ್, ಉಹ್ದ್, ಖಂದಕ್,ಸಲ್ಮಾನುಲ್ ಪಾರಿಸಿ ರ.ಅ ರವರ ತೋಟ, ಉಸ್ಮಾನ್ ರ .ಅ ರವರ ತೋಟ ,ಮಸ್ಜಿದುಲ್ ಖುಬಾ, ಮಸ್ಜಿದುಲ್ ಕಿಬ್ಲತೈನಿ ಮಸ್ಜಿದುಲ್ ದರಾ ಹಾಗೂ, ಹಲವಾರು ಚಾರಿತ್ರಿಕ,ಆಧ್ಯಾತ್ಮಿಕ , ಪ್ರೇಕ್ಷಣೀಯ ಸ್ಥಳಗಳನ್ನು ಸಂದರ್ಶಿಸಿ ಯಾಂಬು ಸಮುದ್ರ ಕಿನಾರೆಗೆ ತಲುಪಿದ ತಂಡವು ಬೋಟಿಂಗ್, ಈಜು, ಕ್ರಿಡೆಗಳಲ್ಲಿ ಬಾಗವಹಿಸಿ ಹಿಂತಿರುಗಿದ ತಂಡವು ಪುನ: ಮರುದಿನ ಸಾಯಂಕಾಲ ಪ್ರಕೃತಿ ರಮಣಿಯ ಉಯಿನುಲ್ ಜುವಾ ಗಾರ್ಡನ್ ನಲ್ಲಿ ಒಟ್ಟು ಸೇರಿ ವಿಶೇಷ ಮಜ್ಲಿಸ್ ಗಳನ್ನು ನಡೆಸಿದರು.
ದಾರಿಯುದ್ದಕ್ಕೂ ದಿಕ್ರ್, ದುವಾ,ಸ್ವಲಾತ್, ನೆಬಿ ಮದ್ಹ್, ಹಾಗೂ ಕ್ವಿಝ ಗಳನ್ನೊಳಗೊಂಡ ಆತ್ಮೀಯತೆಯಿಂದ ಕೂಡಿದ ಯಾತ್ರೆಗೆ ರಿಯಾದ್, ದವಾದ್ಮಿ, ಅಲ್ ರಾಸ್, ಉನೈಝ ದ ಕಾರ್ಯಕರ್ತರು ಕೈ ಜೋಡಿಸಿ ಅವಿಸ್ಮರಣಿಯಗೊಳಿಸಿದರು.
ಚೀಫ್ ಅಮೀರ್ ಯಾಕೂಬ್ ಸಖಾಫಿ ಸಹ ಅಮೀರ್ ಖಯ್ಯುಂ ಜಾಲ್ಸೂರು ಕಂಟ್ರೋಲರ್ ಸಾಲಿ ಬೆಳ್ಳಾರೆ, ರಶೀದ್ ಸಖಾಫಿ ಮಿತ್ತೂರು ನೇತೃತ್ವ ನೀಡಿದರು.


















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು