ಕಣ್ಣೂರು(ಕೇರಳ) :ಇಲ್ಲಿನ ಮುಹ್ಯುದ್ದೀನ್ ಮಸೀದಿಗೆ ಸಗಣಿ ಎರಚಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಇರಿನಾವ್ ಮೂಲದ ದಸ್ತಗೀರ್ ಬಂಧಿತ ಆರೋಪಿ. ಈತ ಮಾನಸಿಕ ಅಸ್ವಸ್ಥನೆಂದು ಶಂಕಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ಆರ್. ಇಳಂಗೋ ಹೇಳಿದರು. ಘಟನೆ ಪೂರ್ವ ಯೋಜಿತವಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಕಣ್ಣೂರು ಮಾರುಕಟ್ಟೆಯ ಮುಹ್ಯಿದ್ದೀನ್ ಮಸೀದಿಯಲ್ಲಿ ಸಗಣಿ ಪತ್ತೆಯಾಗಿತ್ತು.ಮಸೀದಿಯ ಮಿಹ್ರಾಬ್ ಮತ್ತು ಮಿಂಬರ್ ನಡುವೆ ಮತ್ತು ಮಸೀದಿಯ ಹೊರಗೆ ಸಗಣಿ ಕಂಡುಬಂದಿದೆ. ಶುದ್ಧೀಕರಣಕ್ಕೆ ಬಳಸುವ ನೀರಿನ ಹೌಲ್ ನಲ್ಲೂ ಸಗಣಿಯನ್ನು ಬೆರೆಸಲಾಗಿತ್ತು.
ಶುಕ್ರವಾರದ ಪ್ರಾರ್ಥನೆ ಮುಗಿಸಿ ವಿಶ್ವಾಸಿಗಳು ಮಸೀದಿಯಿಂದ ಹೊರಬಂದ ಬಳಿಕ ಈ ಘಟನೆ ನಡೆದಿದೆ. ಮಸೀದಿಯ ಉದ್ಯೋಗಿ ಅಬ್ದುಲ್ ಅಝೀಝ್ ಅವರು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೊದಲ ಬಾರಿಗೆ ಮಸೀದಿಯೊಳಗೆ ಸಗಣಿಯನ್ನು ಕಂಡಿದ್ದು, ನಂತರ ಮಸೀದಿಯ ಆಡಳಿತ ಸಮಿತಿಗೆ ತಿಳಿಸಿದ್ದರು.
ಮೂವರ ಗುಂಪು ಸಗಣಿ ಎರಚಿದೆ ಎಂದು ಪ್ರಾಥಮಿಕವಾಗಿ ಆರೋಪಿಸಲಾಗಿತ್ತು. ಘಟನೆಯ ನಂತರ ಕಣ್ಣೂರು ಡಿಐಜಿ ರಾಹುಲ್ ಆರ್. ನಾಯರ್, ನಗರ ಪೊಲೀಸ್ ಆಯುಕ್ತ ಆರ್. ಇಳಂಗೋ ಮತ್ತಿತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಇದರಿಂದ ಸಿಕ್ಕ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ