ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಯು.ಎ.ಇ. ಇದರ ಗಲ್ಫ್ ಇಶಾರ ಚಂದಾ ಅಭಿಯಾನ 2022 ರ ಉದ್ಘಾಟನಾ ಕಾರ್ಯಕ್ರಮವು ಜನಾಬ್ ಝೈನುದ್ದೀನ್ ಹಾಜಿ ಬೆಳ್ಳಾರೆ ಅವರ ಅಧ್ಯಕ್ಷತೆಯಲ್ಲಿ ಜುಲೈ 16, 2022 ರಂದು ದುಬೈ ಯಲ್ಲಿ ನಡೆಯಿತು.
ಪ್ರಸ್ತುತ ವರ್ಷದ ಚಂದಾಭಿಯಾನವನ್ನು ಉಮರಾ ನೇತಾರರಾದ ಜನಾಬ್ ಅಶ್ರಫ್ ಹಾಜಿ ಅಡ್ಯಾರ್ ರವರು ಉದ್ಘಾಟಿಸಿ ಅಭಿಯಾನಕ್ಕೆ ಶುಭಹಾರೈಸಿದರು.

ಈ ವರ್ಷದ ಗಲ್ಫ್ ಇಶಾರ ಚಂದಾಭಿಯಾನವು ಜುಲೈ 16 ರಿಂದ ಆಗಸ್ಟ್ 31 ರ ವರೆಗೆ ನಡೆಯಲಿದ್ದು ಅಭಿಯಾನದ ಯಶಸ್ವಿಗಾಗಿ ರಾಷ್ಟ್ರೀಯ ಮಟ್ಟದಲ್ಲಿ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಆಗಿ ಜನಾಬ್ ಝೈನುದ್ದೀನ್ ಹಾಜಿ ಬೆಳ್ಳಾರೆ, ಸಂಚಾಲಕರಾಗಿ ಅಕ್ರಮ್ ಬಿ.ಸಿ. ರೋಡ್, ಕೋಶಾಧಿಕಾರಿಯಾಗಿ ಕೆ. ಎಚ್. ಮುಹಮ್ಮದ್ ಸಖಾಫಿ, IT ಸಂಯೋಜಕರಾಗಿ U.T. ನೌಶಾದ್ ರವರನ್ನು ನೇಮಕ ಮಾಡಲಾಯಿತು.

ಸಮಿತಿ ಸದಸ್ಯರಾಗಿ ಅಬ್ದುಲ್ ರಝಾಕ್ ಸಅದಿ ಅಬುಧಾಬಿ, ಶಾದುಲಿ ಶಾರ್ಜಾ ವೆಸ್ಟ್, ಅಲಿ ಕನ್ಯಾನ ದುಬೈ ಸೌತ್, ರಝಾಕ್ ಕಾಜೂರ್ ರಾಸ್ ಅಲ್ ಖೈಮ, ರಿಫಾಯ್ ಗೂನಡ್ಕ ದುಬೈ ನಾರ್ತ್, ಸಿದ್ದೀಕ್ ಅಜ್ಮಾನ್, ಅನ್ಸಾರ್ ಸಾಲೆತ್ತೂರು ಶಾರ್ಜಾ ಈಸ್ಟ್, ಅಬ್ದುಲ್ ರಹೀಂ ಅಲ್ ಐನ್ ರವರನ್ನು ಆರಿಸಲಾಯಿತು.
ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಕೌನ್ಸಿಲ್ ನೇತಾರರಾದ ಜನಾಬ್ PMH ಅಬ್ದುಲ್ ಹಮೀದ್, ಜನಾಬ್ ಉಸ್ಮಾನ್ ಹಾಜಿ, ರಾಷ್ಟ್ರೀಯ ಸಮಿತಿಯ ಹಾಗೂ ಝೋನ್ ಸಮಿತಿಯ ನೇತಾರರು ಪಾಲ್ಗೊಂಡಿದ್ದರು.
ರಾಷ್ಟ್ರೀಯ ಸಮಿತಿಯ ಪಬ್ಲಿಕೇಶನ್ ವಿಭಾಗದ ಅಧೀನದಲ್ಲಿ ನಡೆಯುವ ಗಲ್ಫ್ ಇಶಾರ ಚಂದಾ ಅಭಿಯಾನವನ್ನು ಯಶಸ್ವಿಗೊಳಿಸಲು ಝೋನ್, ಸೆಕ್ಟರ್ ಹಾಗೂ ಯೂನಿಟ್ ನಾಯಕರು ಗಳಿಗೆ ಕರೆ ನೀಡಲಾಯಿತು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ