ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಯು.ಎ.ಇ. ಇದರ ಗಲ್ಫ್ ಇಶಾರ ಚಂದಾ ಅಭಿಯಾನ 2022 ರ ಉದ್ಘಾಟನಾ ಕಾರ್ಯಕ್ರಮವು ಜನಾಬ್ ಝೈನುದ್ದೀನ್ ಹಾಜಿ ಬೆಳ್ಳಾರೆ ಅವರ ಅಧ್ಯಕ್ಷತೆಯಲ್ಲಿ ಜುಲೈ 16, 2022 ರಂದು ದುಬೈ ಯಲ್ಲಿ ನಡೆಯಿತು.
ಪ್ರಸ್ತುತ ವರ್ಷದ ಚಂದಾಭಿಯಾನವನ್ನು ಉಮರಾ ನೇತಾರರಾದ ಜನಾಬ್ ಅಶ್ರಫ್ ಹಾಜಿ ಅಡ್ಯಾರ್ ರವರು ಉದ್ಘಾಟಿಸಿ ಅಭಿಯಾನಕ್ಕೆ ಶುಭಹಾರೈಸಿದರು.

ಈ ವರ್ಷದ ಗಲ್ಫ್ ಇಶಾರ ಚಂದಾಭಿಯಾನವು ಜುಲೈ 16 ರಿಂದ ಆಗಸ್ಟ್ 31 ರ ವರೆಗೆ ನಡೆಯಲಿದ್ದು ಅಭಿಯಾನದ ಯಶಸ್ವಿಗಾಗಿ ರಾಷ್ಟ್ರೀಯ ಮಟ್ಟದಲ್ಲಿ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಆಗಿ ಜನಾಬ್ ಝೈನುದ್ದೀನ್ ಹಾಜಿ ಬೆಳ್ಳಾರೆ, ಸಂಚಾಲಕರಾಗಿ ಅಕ್ರಮ್ ಬಿ.ಸಿ. ರೋಡ್, ಕೋಶಾಧಿಕಾರಿಯಾಗಿ ಕೆ. ಎಚ್. ಮುಹಮ್ಮದ್ ಸಖಾಫಿ, IT ಸಂಯೋಜಕರಾಗಿ U.T. ನೌಶಾದ್ ರವರನ್ನು ನೇಮಕ ಮಾಡಲಾಯಿತು.

ಸಮಿತಿ ಸದಸ್ಯರಾಗಿ ಅಬ್ದುಲ್ ರಝಾಕ್ ಸಅದಿ ಅಬುಧಾಬಿ, ಶಾದುಲಿ ಶಾರ್ಜಾ ವೆಸ್ಟ್, ಅಲಿ ಕನ್ಯಾನ ದುಬೈ ಸೌತ್, ರಝಾಕ್ ಕಾಜೂರ್ ರಾಸ್ ಅಲ್ ಖೈಮ, ರಿಫಾಯ್ ಗೂನಡ್ಕ ದುಬೈ ನಾರ್ತ್, ಸಿದ್ದೀಕ್ ಅಜ್ಮಾನ್, ಅನ್ಸಾರ್ ಸಾಲೆತ್ತೂರು ಶಾರ್ಜಾ ಈಸ್ಟ್, ಅಬ್ದುಲ್ ರಹೀಂ ಅಲ್ ಐನ್ ರವರನ್ನು ಆರಿಸಲಾಯಿತು.
ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಕೌನ್ಸಿಲ್ ನೇತಾರರಾದ ಜನಾಬ್ PMH ಅಬ್ದುಲ್ ಹಮೀದ್, ಜನಾಬ್ ಉಸ್ಮಾನ್ ಹಾಜಿ, ರಾಷ್ಟ್ರೀಯ ಸಮಿತಿಯ ಹಾಗೂ ಝೋನ್ ಸಮಿತಿಯ ನೇತಾರರು ಪಾಲ್ಗೊಂಡಿದ್ದರು.
ರಾಷ್ಟ್ರೀಯ ಸಮಿತಿಯ ಪಬ್ಲಿಕೇಶನ್ ವಿಭಾಗದ ಅಧೀನದಲ್ಲಿ ನಡೆಯುವ ಗಲ್ಫ್ ಇಶಾರ ಚಂದಾ ಅಭಿಯಾನವನ್ನು ಯಶಸ್ವಿಗೊಳಿಸಲು ಝೋನ್, ಸೆಕ್ಟರ್ ಹಾಗೂ ಯೂನಿಟ್ ನಾಯಕರು ಗಳಿಗೆ ಕರೆ ನೀಡಲಾಯಿತು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ