ಮಂಗಳೂರು: ಇತ್ತೀಚೆಗೆ ಸುಳ್ಯದ ಕಲಂಜದಲ್ಲಿ ದುಷ್ಕರ್ಮಿ ಕೇಸರಿ ದಳಗಳು ಮಸೂದ್ ಎಂಬ ಮುಸ್ಲಿಮ್ ಯುವಕನೋರ್ವನನ್ನು ಮಾತುಕತೆಯ ನೆಪದಲ್ಲಿ ಕರೆದು ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮವಾಗಿ ಯುವಕ ಇಂದು ಮೃತ ಪಟ್ಟಿದ್ದು, ಕೇಸರಿ ದಳಗಳ ಈ ಕೃತ್ಯ ಕರ್ನಾಟಕದಲ್ಲಿನ ಗುಂಪು ಹತ್ಯೆಯ ಭಾಗವಾಗಿ ನಡೆದಂತಿದೆ. ಈ ಕೃತ್ಯವನ್ನು ದಕ್ಷಿಣ ಕನ್ನಡ ಮುಸ್ಲಿಂ ಒಕ್ಕೂಟವು ತೀವ್ರ ಖಂಡಿಸುತ್ತಿದೆ.
ಕಾನೂನನ್ನು ಕೈಗೆತ್ತು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ಸಂಘ ಪರಿವಾರದ ಮುಂದುವರಿದ ಭಾಗ ಎಂಬಂತೆ, ಮಸೂದ್ ನನ್ನು ಗುರಿ ಇಟ್ಟು ಪೂರ್ವ ಯೋಜಿತವಾಗಿ ಈ ಕೃತ್ಯವನ್ನು ಗುಂಪು ಹತ್ಯೆಯ ರೂಪದಲ್ಲಿಯೇ ನಡೆಸಲಾಗಿದೆ.
ಈ ಕೃತ್ಯದ ಅಪರಾಧಿಗಳನ್ನು ಬಂಧಿಸಿ,ಸರಕಾರ ಕಠಿಣ ಕಾನೂನು ಕ್ರಮದೊಂದಿಗೆ, ಸಂತ್ರಸ್ತ ಮಸೂದ್ ನ ಕುಟುಂಬಕ್ಕೆ ಪರಿಹಾರ ವಿತರಿಸಬೇಕು ಮತ್ತು ವಿರೋಧ ಪಕ್ಷ ಈ ಬಗ್ಗೆ ತೀವ್ರ ಒತ್ತಡ ತರಬೇಕಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ.ಅಶ್ರಫ್ ರವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ