janadhvani

Kannada Online News Paper

ಪಾಝಿಲ್ ಹತ್ಯೆಗೆ : ತೀವ್ರ ಖಂಡನೆ ಕಾನೂನು ಕ್ರಮ ಕೈಗೊಳ್ಳಲು ಮುಸ್ಲಿಮ್ ಜಮಾಅತ್ ಒತ್ತಾಯ

ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಹತ್ಯೆಗೆ ತೀವ್ರ ಖoಡನೆ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ,ಸೂಕ್ತ ಕಾನೂನು ಕ್ರಮ ಕೈಗೊಳ್ಳ ಬೇಕು
ಅರೋಪಿಗಳು ಯಾರೇ ಆದರೂ ಶೀಘ್ರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಕೋಮು ಸೌಹಾರ್ದತೆ ಹಾಳಾಗುವ ಸೂಚನೆ ದಟ್ಟವಾಗಿದೆ. ಗೃಹ ಇಲಾಖೆ ಹಾಗೂ ಸರಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಉಳಿಸಲು ತಕ್ಷಣ ಕಾರ್ಯ ಪ್ರವೃತ್ತಿಯಿಂದಾಗಬೇಕೆಂದು ಮುಸ್ಲಿಂ ಜಮಾಅತ್ ಸಂಚಾಲಕ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ವಿನಂತಿಸಿದ್ದಾರೆ