ಕಾಟಿಪಳ್ಳ: ಸುರತ್ಕಲ್ ನಲ್ಲಿ ಹತ್ಯೆಯಾದ ಮಂಗಳಪೇಟೆ ನಿವಾಸಿ ಫಾಝಿಲ್ ಮನೆಗೆ ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಅಬೂಸುಫ್ಯಾನ್ ಇಬ್ರಾಹಿಂ ಮದನಿ, ಕರ್ನಾಟಕ ಜಂಇಯತುಲ್ ಉಲಮಾ ಕಾರ್ಯದರ್ಶಿ ತೋಕೆ ಮುಹ್ಯಿದ್ದೀನ್ ಕಾಮಿಲ್ ಸಖಾಫಿ, ಸುನ್ನೀ ಜಂಇಯತುಲ್ ಮುಅಲ್ಲಿಮೀನ್ ರಾಜ್ಯ ನಾಯಕ ಕೆಕೆಎಂ ಸಖಾಫಿ, ಎಸ್ ಎಸ್ ಎಫ್ ರಾಜ್ಯ ಕೋಶಾಧಿಕಾರಿ ಸುಫ್ಯಾನ್ ಸಖಾಫಿ, ದಕ್ಷಿಣ ಜಿಲ್ಲಾ ವೆಸ್ಟ್ ನಾಯಕ ಆರಿಫ್ ಝುಹ್ರಿ,ಜಂಇಯತುಲ್ ಉಲಮಾ ಸುರತ್ಕಲ್ ವಲಯ ನಾಯಕರಾದ ಫಾರುಕ್ ಸಖಾಫಿ ಮುಂತಾದ ನಾಯಕರು ಭೇಟಿ ನೀಡಿ ಸಾಂತ್ವನ ಪಡಿಸಿದರು.
ಪ್ರವೀನ್ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಮಸೂದ್ ಮತ್ತು ಫಾಝಿಲ್ ಹತ್ಯೆಯನ್ನು ಪರಿಗಣಿಸಬೇಕು ಹಾಗೂ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸಿ ಎಂ ರವರು ಮಸೂದ್ ಮನೆಗೆ ಹೋಗದ್ದು ಮುಸ್ಲಿಂ ಸಮುದಾಯದಲ್ಲಿ ಅಭದ್ರತೆಯ ಭಾವನೆ ಮೂಡಲು ಕಾರಣ ವಾಗಿದೆ. ಇದೀಗ ಅಮಾಯಕ ಫಾಝಿಲ್ ಹತ್ಯೆಯಾಗಿ ದಿನ ಕಳೆದರು ಸರ್ಕಾರ ಪರವಾಗಿ ಸ್ಥಳೀಯ ಶಾಸಕರ ಸಹಿತ ಯಾವ ರಾಜಕಾರಣಿಗಳು ಭೇಟಿ ನೀಡದ್ದು ಸರ್ಕಾರದ ತಾರತಮ್ಯ ನೀತಿಯನ್ನು ಬೊಟ್ಟುಮಾಡುತ್ತದೆ ಎಂದು ಅಭಿಪ್ರಾಯ ಪಟ್ಟರು.
ಮಸೂದ್ ಮತ್ತು ಫಾಝಿಲ್ ಅಂತ್ಯ ಸಂಸ್ಕಾರ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಮುಸ್ಲಿಂ ಸಮುದಾಯ ಸಂಯಮ ಪಾಲಿಸಿದೆ.ಮುಸ್ಲಿಮರ ನೋವನ್ನು ಸರ್ಕಾರ ಅರ್ಥಮಾಡಿಕೊಂಡು ನ್ಯಾಯ ನೀಡಬೇಕೆಂದು ಆಗ್ರಹಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ