ಕಾಟಿಪಳ್ಳ: ಸುರತ್ಕಲ್ ನಲ್ಲಿ ಹತ್ಯೆಯಾದ ಮಂಗಳಪೇಟೆ ನಿವಾಸಿ ಫಾಝಿಲ್ ಮನೆಗೆ ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಅಬೂಸುಫ್ಯಾನ್ ಇಬ್ರಾಹಿಂ ಮದನಿ, ಕರ್ನಾಟಕ ಜಂಇಯತುಲ್ ಉಲಮಾ ಕಾರ್ಯದರ್ಶಿ ತೋಕೆ ಮುಹ್ಯಿದ್ದೀನ್ ಕಾಮಿಲ್ ಸಖಾಫಿ, ಸುನ್ನೀ ಜಂಇಯತುಲ್ ಮುಅಲ್ಲಿಮೀನ್ ರಾಜ್ಯ ನಾಯಕ ಕೆಕೆಎಂ ಸಖಾಫಿ, ಎಸ್ ಎಸ್ ಎಫ್ ರಾಜ್ಯ ಕೋಶಾಧಿಕಾರಿ ಸುಫ್ಯಾನ್ ಸಖಾಫಿ, ದಕ್ಷಿಣ ಜಿಲ್ಲಾ ವೆಸ್ಟ್ ನಾಯಕ ಆರಿಫ್ ಝುಹ್ರಿ,ಜಂಇಯತುಲ್ ಉಲಮಾ ಸುರತ್ಕಲ್ ವಲಯ ನಾಯಕರಾದ ಫಾರುಕ್ ಸಖಾಫಿ ಮುಂತಾದ ನಾಯಕರು ಭೇಟಿ ನೀಡಿ ಸಾಂತ್ವನ ಪಡಿಸಿದರು.
ಪ್ರವೀನ್ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಮಸೂದ್ ಮತ್ತು ಫಾಝಿಲ್ ಹತ್ಯೆಯನ್ನು ಪರಿಗಣಿಸಬೇಕು ಹಾಗೂ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸಿ ಎಂ ರವರು ಮಸೂದ್ ಮನೆಗೆ ಹೋಗದ್ದು ಮುಸ್ಲಿಂ ಸಮುದಾಯದಲ್ಲಿ ಅಭದ್ರತೆಯ ಭಾವನೆ ಮೂಡಲು ಕಾರಣ ವಾಗಿದೆ. ಇದೀಗ ಅಮಾಯಕ ಫಾಝಿಲ್ ಹತ್ಯೆಯಾಗಿ ದಿನ ಕಳೆದರು ಸರ್ಕಾರ ಪರವಾಗಿ ಸ್ಥಳೀಯ ಶಾಸಕರ ಸಹಿತ ಯಾವ ರಾಜಕಾರಣಿಗಳು ಭೇಟಿ ನೀಡದ್ದು ಸರ್ಕಾರದ ತಾರತಮ್ಯ ನೀತಿಯನ್ನು ಬೊಟ್ಟುಮಾಡುತ್ತದೆ ಎಂದು ಅಭಿಪ್ರಾಯ ಪಟ್ಟರು.
ಮಸೂದ್ ಮತ್ತು ಫಾಝಿಲ್ ಅಂತ್ಯ ಸಂಸ್ಕಾರ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಮುಸ್ಲಿಂ ಸಮುದಾಯ ಸಂಯಮ ಪಾಲಿಸಿದೆ.ಮುಸ್ಲಿಮರ ನೋವನ್ನು ಸರ್ಕಾರ ಅರ್ಥಮಾಡಿಕೊಂಡು ನ್ಯಾಯ ನೀಡಬೇಕೆಂದು ಆಗ್ರಹಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ