janadhvani

Kannada Online News Paper

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಮನೆಗೆ ದ. ಕ. ಜಿಲ್ಲಾ ವಖ್ಫ್ ಮಂಡಳಿ ಚೆಯರ್ಮೆನ್ ಭೇಟಿ

ಒಂದೆರಡು ದಿನಗಳಲ್ಲಿ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರು ಭೇಟಿ ನೀಡಲಿದ್ದಾರೆ ಎಂದು ನಾಸಿರ್ ಲಕ್ಕಿಸ್ಟಾರ್ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದರು.

ಮಂಗಳೂರು: ಇಲ್ಲಿನ ಹೊರವಲಯದ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳಪೇಟೆಯ ಫಾಜಿಲ್ ಮನೆಗೆ ದ. ಕ. ಜಿಲ್ಲಾ ವಖ್ಫ್ ಮಂಡಳಿ ಚೆಯರ್ಮೆನ್ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಇದೇ ಸಂಧರ್ಭದಲ್ಲಿ ಜಿಲ್ಲಾ ವಖ್ಫ್ ಮಂಡಳಿ ಅಧ್ಯಕ್ಷರ ಮೂಲಕ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಚೆಯರ್ಮೆನ್ ಮೌಲಾನ ಎನ್. ಕೆ. ಎಂ. ಶಾಫಿ ಸ ಅದಿ ದೂರವಾಣಿ ಮೂಲಕ ಮೃತ ಫಾಝಿಲ್ ತಂದೆಯವರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು.

ಬೆಂಗಳೂರಿನಲ್ಲಿ ಸರಕಾರ ಮತ್ತು ವಖ್ಫ್ ಬೋರ್ಡ್ ನ ನಡುವಿನ ಅಗತ್ಯ ಕೆಲಸವಿರುವ ಕಾರಣ ಮೃತ ಫಾಝಿಲ್ ಮನೆಗೆ ಭೇಟಿ ನೀಡಲು ವಿಳಂಬವಾಗಿದ್ದು ಒಂದೆರಡು ದಿನಗಳಲ್ಲಿ ಭೇಟಿ ನೀಡಲಿದ್ದಾರೆ ಎಂದು ನಾಸಿರ್ ಲಕ್ಕಿಸ್ಟಾರ್ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದರು. ಅಲ್ಲದೆ ಫಾಝಿಲ್ ಕುಟುಂಬಕ್ಕೆ ಅಗತ್ಯವಾದ ಎಲ್ಲಾ ರೀತಿಯ ನೆರವು ನೀಡುವುದಾಗಿ ಇದೇ ಭರವಸೆ ನೀಡಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.

ನಿಯೋಗದಲ್ಲಿ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾರಿಸ್ ಬೈಕಂಪಾಡಿ, ಜಿಲ್ಲಾ ವಖ್ಫ್ ಸಮಿತಿಯ ಸದಸ್ಯರಾದ ಬಿ. ಕೆ. ಸಿರಾಜುದ್ದೀನ್, ಹಿದಾಯತ್, ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.