ಮಂಗಳೂರು: ಕರಾವಳಿ ಕರ್ನಾಟಕದ ವಿಷಯದಲ್ಲಿ ರಾಜ್ಯದ ಜನರು ಹೆಮ್ಮೆ ಪಡುವ ಕಾಲವೊಂದಿತ್ತು. ಆದರೆ ಇತ್ತೀಚಿಗಿನ ಹಲವು ದಶಕಗಳಿಂದ ಕರಾವಳಿ ಜಿಲ್ಲೆಯ ಜನತೆಯನ್ನು ಮತೀಯ ಧ್ರುವೀಕರಣ ಕಾರಣದಿಂದ ವಿಭಜಿಸುತ್ತಾ ಬಂದು, ಜನರು ಪ್ರಸ್ತುತ ಸಾಮಾನ್ಯ ಬದುಕು ನಿರ್ವಹಿಸುವ ಕನಿಷ್ಠ ಸಾಮರ್ಥ್ಯದಿಂದ ವಂಚಿತಾರಗಿದ್ದಾರೆ.
ಜಿಲ್ಲೆಯ ಉದ್ಯಮ, ಶಿಕ್ಷಣ, ಶಾಂತಿ ಸುವ್ಯವಸ್ಥೆ ದಿನೇ ದಿನೇ ಕುಸಿಯುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ವಾಣಿಜ್ಯ ಮಳಿಗೆಗಳು ಜಿಲ್ಲೆಯಿಂದ ವಲಸೆ ಪ್ರಾರಂಭಿಸಿದೆ.ಕಳೆದ ಹಲವು ದಿನಗಳಿಂದ ಜನರಿಗೆ ಬೇಡದ ನಿಷೇದಾಜ್ಞೆ ಜಾರಿಯಲ್ಲಿದೆ.
ಜನತೆಗೆ ಜಿಲ್ಲಾಡಳಿತ, ಸರ್ಕಾರ ಮತ್ತು ಸರ್ಕಾರೇತರ ಶಿಕ್ಷಣ ಸಂಸ್ಥೆಗಳು, ಸ್ವಯಂ ಸೇವಕರ ನೆರವಿನಿಂದ ಜನತೆಗೆ ನೈತಿಕ ಉತ್ತೇಜನ ನೀಡಿ ಸಾಮರಸ್ಯ ಬೆಸೆಯಲು ಖ್ಯಾತ ದಾರ್ಶನಿಕರಾದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪ್ರಸಿದ್ಧ ಮಾತುಗಳನ್ನು ಅಂಗೀಕರಿಸಿ ‘ ಒಂದೇ ಕುಲ – ಮತ – ದೇವರು ‘ ಎಂಬ ಧ್ಯೇಯ ವಾಕ್ಯ ಘೋಷಣೆಯ ಪ್ರಚಾರ ಮೂಲಕ ಜಿಲ್ಲೆಯಲ್ಲಿ ಶಾಂತಿ ಸ್ಥಾಪನೆಗೆ ಮುಂದಾಗಲಿ.
ಜನರು ಅತ್ಯಂತ ಶೀಘ್ರ ಸಹಜ ಜೀವನಕ್ಕೆ ಮರಳುವ ಶಾಂತಿ ಸುವ್ಯವಸ್ಥೆ ಸ್ಥಾಪನೆಗೆ ಜಿಲ್ಲಾಡಳಿತ ಮಾದರಿಯಾಗಲಿ, ಅದರೊಂದಿಗೆ ಜನರು ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರ ವಹಿಸಿ,ಗೊಂದಲಗಳಿಂದ ದೂರ ಉಳಿಯಲು ಪ್ರಯತ್ನಿಸಲಿ ಎಂದು ಕೆ.ಅಶ್ರಫ್.
(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ