ದೇಶವು 75 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಇದ್ದು, ಪ್ರತಿ ವರ್ಷದಂತೆ ಮುಸ್ಲಿಮರು ಸ್ವಾತಂತ್ರ್ಯೋತ್ಸವ ಆಚರಿಸಲಿದ್ದಾರೆ. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈ ದೇಶದ ಮುಸ್ಲಿಮರು ಮಹತ್ವದ ಪಾತ್ರ ವಹಿಸಿದ್ದಾರೆ.
ಘಟಾನುಘಟಿ ಮುಸ್ಲಿಮರು ಬ್ರಿಟಿಷರ ವಿರುದ್ದ ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ.ಈ ದೇಶದ ಸರ್ವ ಧರ್ಮದವರ ಸಾನಿಧ್ಯದಲ್ಲಿ ಅಂದು ಹೋರಾಟ ನಡೆದು, ತಮ್ಮ ದೇಶ ಪ್ರೇಮವನ್ನು ಮೆರೆದಿದ್ದಾರೆ.
ಈ ದೇಶದ ತ್ರಿವರ್ಣ ಧ್ವಜವನ್ನು ವಿನ್ಯಾಸ ಗೊಳಿಸಿದ ಕೀರ್ತಿಯು ಸುರಯ್ಯ ತ್ಯಾಬ್ಜಿ ಎಂಬ ಮುಸ್ಲಿಮ್ ಮಹಿಳೆಗೆ ಸಲ್ಲಬೇಕು. ಈ ದೇಶದ ಧ್ವಜ ಲಾಂಛನಕ್ಕಾಗಿ ಸುರಯ್ಯಾ ತ್ಯಾಬ್ಜಿ ಅವರು ಅಶೋಕ ಚಕ್ರವನ್ನು ಆಯ್ಕೆ ಮಾಡಿದರು.ಇದು ಅವರ ಮತೇತರ ಚಿಂತನೆಯನ್ನು ಪ್ರತಿಪಾದಿಸುತ್ತದೆ. ಈ ದೇಶದ ಮುಸ್ಲಿಮ್ ಸಾಮಾನ್ಯ ಜನತೆ, ಪ್ರತಿನಿಧಿಗಳು, ಸಂಸ್ಥೆಗಳು, ಸಂಘಟನೆಗಳು ಅಂದು ಪಡೆದ ಸ್ವಾತಂತ್ರ್ಯದ ಮಹತ್ವವನ್ನು ಅರಿತು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾ ಬಂದಿರುತ್ತಾರೆ.
ಈ ದೇಶದ ಮುಸ್ಲಿಮರ ದೇಶಪ್ರೇಮವನ್ನು ಬಹುಷಃ ಹತ್ತಿರದಿಂದ ಬಲ್ಲವರಾಗಿದ್ದಾರೆ ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರು. ಪ್ರಧಾನಿ ನರೇಂದ್ರ ಮೋದಿಯವರು ಹರ್ ಘರ್ ಮೆ ತಿರಂಗಾ ಅಭಿಯಾನ ಘೋಷಿಸಿದ್ದು , ಈ ದೇಶದ ಮೇಲಿನ ಮುಸ್ಲಿಮರ ದೇಶ ಪ್ರೇಮವನ್ನು,ಸ್ವಾತಂತ್ರ್ಯ ದಿನಾಚರಣೆಯ ಮಾನದಂಡದ ಮೂಲಕ ಅಳೆಯಲು ಅಲ್ಲ , ಬದಲಾಗಿ ಈ ದೇಶದಲ್ಲಿ ತಿರಂಗಾ ಹೊರತಾದ ಇತರ ಧ್ವಜಗಳಲ್ಲಿ ಎಷ್ಟು ಜನರಿಗೆ ಆಸಕ್ತಿ ಇದೆ ಎಂಬ ವೀಕ್ಷಣೆಗಾಗಿ ಎಂದು ಆಲೋಚಿಸ ಬೇಕಿದೆ.
ಹಾಗೇನಿದ್ದರೂ,ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಯಶಸ್ವಿಯಾಗಲಿ ಎಂದು ಕೆ.ಅಶ್ರಫ್.
(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಹಾರೈಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್