ದೇಶವು 75 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಇದ್ದು, ಪ್ರತಿ ವರ್ಷದಂತೆ ಮುಸ್ಲಿಮರು ಸ್ವಾತಂತ್ರ್ಯೋತ್ಸವ ಆಚರಿಸಲಿದ್ದಾರೆ. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈ ದೇಶದ ಮುಸ್ಲಿಮರು ಮಹತ್ವದ ಪಾತ್ರ ವಹಿಸಿದ್ದಾರೆ.
ಘಟಾನುಘಟಿ ಮುಸ್ಲಿಮರು ಬ್ರಿಟಿಷರ ವಿರುದ್ದ ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ.ಈ ದೇಶದ ಸರ್ವ ಧರ್ಮದವರ ಸಾನಿಧ್ಯದಲ್ಲಿ ಅಂದು ಹೋರಾಟ ನಡೆದು, ತಮ್ಮ ದೇಶ ಪ್ರೇಮವನ್ನು ಮೆರೆದಿದ್ದಾರೆ.
ಈ ದೇಶದ ತ್ರಿವರ್ಣ ಧ್ವಜವನ್ನು ವಿನ್ಯಾಸ ಗೊಳಿಸಿದ ಕೀರ್ತಿಯು ಸುರಯ್ಯ ತ್ಯಾಬ್ಜಿ ಎಂಬ ಮುಸ್ಲಿಮ್ ಮಹಿಳೆಗೆ ಸಲ್ಲಬೇಕು. ಈ ದೇಶದ ಧ್ವಜ ಲಾಂಛನಕ್ಕಾಗಿ ಸುರಯ್ಯಾ ತ್ಯಾಬ್ಜಿ ಅವರು ಅಶೋಕ ಚಕ್ರವನ್ನು ಆಯ್ಕೆ ಮಾಡಿದರು.ಇದು ಅವರ ಮತೇತರ ಚಿಂತನೆಯನ್ನು ಪ್ರತಿಪಾದಿಸುತ್ತದೆ. ಈ ದೇಶದ ಮುಸ್ಲಿಮ್ ಸಾಮಾನ್ಯ ಜನತೆ, ಪ್ರತಿನಿಧಿಗಳು, ಸಂಸ್ಥೆಗಳು, ಸಂಘಟನೆಗಳು ಅಂದು ಪಡೆದ ಸ್ವಾತಂತ್ರ್ಯದ ಮಹತ್ವವನ್ನು ಅರಿತು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾ ಬಂದಿರುತ್ತಾರೆ.
ಈ ದೇಶದ ಮುಸ್ಲಿಮರ ದೇಶಪ್ರೇಮವನ್ನು ಬಹುಷಃ ಹತ್ತಿರದಿಂದ ಬಲ್ಲವರಾಗಿದ್ದಾರೆ ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರು. ಪ್ರಧಾನಿ ನರೇಂದ್ರ ಮೋದಿಯವರು ಹರ್ ಘರ್ ಮೆ ತಿರಂಗಾ ಅಭಿಯಾನ ಘೋಷಿಸಿದ್ದು , ಈ ದೇಶದ ಮೇಲಿನ ಮುಸ್ಲಿಮರ ದೇಶ ಪ್ರೇಮವನ್ನು,ಸ್ವಾತಂತ್ರ್ಯ ದಿನಾಚರಣೆಯ ಮಾನದಂಡದ ಮೂಲಕ ಅಳೆಯಲು ಅಲ್ಲ , ಬದಲಾಗಿ ಈ ದೇಶದಲ್ಲಿ ತಿರಂಗಾ ಹೊರತಾದ ಇತರ ಧ್ವಜಗಳಲ್ಲಿ ಎಷ್ಟು ಜನರಿಗೆ ಆಸಕ್ತಿ ಇದೆ ಎಂಬ ವೀಕ್ಷಣೆಗಾಗಿ ಎಂದು ಆಲೋಚಿಸ ಬೇಕಿದೆ.
ಹಾಗೇನಿದ್ದರೂ,ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಯಶಸ್ವಿಯಾಗಲಿ ಎಂದು ಕೆ.ಅಶ್ರಫ್.
(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಹಾರೈಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ