ಧಾರ್ಮಿಕ ಮತ್ತು ಲೌಕಿಕ ವಿದ್ಯಾಭ್ಯಾಸಗಳಿಂದ ವಂಚಿತರಾಗಿ ಬಲುದೂರ ಉಳಿದಿರುವ ಮಧ್ಯ ಹಾಗೂ ಉತ್ತರ ಕರ್ನಾಟಕದ ಜನರಿಗಾಗಿ ಹಲವಾರು ದಾಯಿಗಳನ್ನು ನೇಮಿಸಿ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ರಾಂತಿ ನಡೆಸುತ್ತಿರುವ ದಅವಾ ಚಟುವಟಿಕೆಯೇ ಇಹ್ಸಾನ್ ಕರ್ನಾಟಕ.


ಕ

ರ್ನಾಟಕ ಕಲ್ಚರಲ್ ಫೌಂಡೇಶನ್(ಕೆ.ಸಿ.ಎಫ್) ವತಿಯಿಂದ ಸೌದಿ ಅರೇಬಿಯಾದಾದ್ಯಂತ ನಡೆಯುತ್ತಿರುವ ಇದರ ಪ್ರಚಾರದ ಭಾಗವಾಗಿ ಅಗಸ್ಟ್ 4ರಂದು ಬುರೈದ ತರ್ಫಿಯಾ ಇಸ್ತಿರಾದಲ್ಲಿ ಪ್ರಚಾರ ಸಮಾವೇಶ ನಡೆಯಿತು
ಉತ್ತರ ಕರ್ನಾಟಕದ ದಾರ್ಮಿಕ ಶಿಕ್ಷಣದ ಕೊರತೆ, ಮದರಸ , ಮಸೀದಿಗಳ ಅನಾನುಕೂಲತೆ, ನಿರಕ್ಷರತೆ ಹಾಗೂ ಅಲ್ಲಿನ ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬಹು ಬಾಷಾ ಪಂಡಿತರೂ. ಇಹ್ಸಾನ್ ಕರ್ನಾಟಕ ಇದರ ಎಕ್ಸ್ಕ್ಯೂಟಿವ್ ಆಫಿಸರೂ ಆದ ಮೌಲಾನ ಮುಹಮ್ಮದ್ ಅನ್ವರ್ ಅಸ್ ಅದಿ ವೀಡಿಯೋ ಸಹಿತ ವಿವರಿಸಿದರು.
ಕಾರಟಗಿಯಲ್ಲಿ ಹಿಪ್ಲುಲ್ ಕುರ್ಆನ್ ಹಾಗೂ ಕೊಪ್ಪಳ ಜಿಲ್ಲೆಯ ಹಳ್ಳಿ ದಅವಾ ಪದ್ದತ್ತಿಗಾಗಿ ಝೋನ್ ವತಿಯಿಂದ 25 ಲಕ್ಷ ರೂಪಾಯಿಗಳ ಯೋಜನೆಯನ್ನು ಸಮರ್ಪಿಸಲಾಯಿತು.
ಝೋನ್ ಇಹ್ಸಾನ್ ಇಲಾಖೆ ಅಧ್ಯಕ್ಷ ಫೈಝಲ್ ಉಪ್ಪಿನಂಗಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಬಾದುಷಾ ಸಖಾಫಿ ಆಲಪುಝ ಉದ್ಘಾಟಿಸಿದರು ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಪ್ರದಾನ ಕಾರ್ಯದರ್ಶಿ ಸಾಲಿ ಬೆಳ್ಳಾರೆ ಪ್ರಸ್ತಾವಿಕ ಮಾತುಗಳನ್ನಾಡಿದರು.
ಹಂಝ ಮೈಂದಾಲ, ಸಿದ್ದೀಕ್ ಸಖಾಫಿ ಪೆರುವಾಯಿ ಮುಅಝಂ ರತ್ನಗಿರಿ., ರಝಾಕ್ ಅಡ್ಡೂರು , ಹಾಜಿ ಮುಹಮ್ಮದ್ ಕುಕ್ಕುವಳ್ಳಿ ಸಹಿತ ಹಲವಾರು ಧಾರ್ಮಿಕ ಸಾಮಾಜಿಕ ನೇತಾರರು ಬಾಗವಹಿಸಿದರು
ಸಾಮಾಜಿಕ ಹಾಗೂ ಸಹಕಾರ ಮನೋಭಾವದ ಸೇವೆಗಾಗಿ ಮೂವರು ದುರೀಣರನ್ನು ಮೊಮೆಂಟೊ ನೀಡಿ ಗೌರವಿಸಲಾಯಿತು ಮಹಿಳೆಯರಿಗಾಗಿ ನಡೆದ ಪ್ರಬಂಧ ಹಾಗೂ ಕ್ವಿಝ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಫ್ರೆಂಡ್ಸ್ ಕುಕ್ಕುವಳ್ಳಿ ಹಾಗೂ ನಜಂ ಫ್ರೆಂಡ್ಸ್ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಮಡಿಲಿಗೇರಿಸಿ ಟ್ರೋಪಿಯನ್ನು ಎತ್ತಿದರು ಬಶೀರ್ ಕನ್ಯಾನ ಸ್ವಾಗತಿಸಿ ಇರ್ಷಾದ್ ಸಚ್ಚೇರಿಪೇಟೆ ವಂದಿಸಿದ ಕಾಯ೯ಕ್ರಮವನ್ನು ಇಸಾಕ್ ಬಾ ಹಸನಿ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ