janadhvani

Kannada Online News Paper

ಫಾಝಿಲ್ ಮನೆಗೆ ಕರ್ನಾಟಕ ಮುಸ್ಲಿಂ ಜಮಾಅತ್ ಪ್ರ.ಕಾರ್ಯದರ್ಶಿ ಶಾಫಿ ಸಅದಿ ಭೇಟಿ

ಸುರತ್ಕಲ್ : ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಮೌಲಾನ ಎನ್.ಕೆ.ಎಂ ಶಾಫಿ ಸಅದಿ ಯವರು ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳಪೇಟೆಯ ಫಾಝಿಲ್ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ವತಿಯಿಂದ ಎರಡು ಲಕ್ಷ ರೂಪಾಯಿ ಚೆಕ್ಕನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದರು.

ನಿಯೋಗದಲ್ಲಿ ಮಂಗಳೂರು ತಾಲೂಕು ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಎಸ್.ಎಸ್.ಎಫ್. ಜಿಲ್ಲಾಧ್ಯಕ್ಷರಾದ ನವಾಜ್ ಸಖಾಫಿ, ಮುಸ್ಲಿಂ ಜಮಾಅತ್ ತಾಲೂಕು ಸಮಿತಿಯ ಅಬ್ದುಲ್ ರಹಿಮಾನ್ ಮೊಗರ್ಪಣೆ, ಇಕ್ಬಾಲ್ ಕೃಷ್ಣಾಪುರ, ಝುಹುರಿ ಉಸ್ತಾದ್ ಮಂಗಳಪೇಟೆ, ಸೈದುದ್ದೀನ್, ಹಮೀದ್ ಕಟ್ಲ, ಹಸನಬ್ಬ ಮಂಗಳಪೇಟೆ, ಅದ್ದು ಹಾಜಿ ಪ್ರಿಂಟೆಕ್, ಮುಂತಾದ ಅನೇಕ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರ.