ಪಾಟ್ನಾ: ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬಿದ್ದಿದೆ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದ್ದಾರೆ.
ಜೆಡಿಯು ಸಂಸದರು ಮತ್ತು ಶಾಸಕರ ಸಭೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ಮುರಿದುಕೊಳ್ಳಲು ಪಕ್ಷವು ಸರ್ವಾನುಮತದಿಂದ ನಿರ್ಧಾರಕ್ಕೆ ಬಂದಿದ್ದು ನಂತರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇದೇ ವೇಳೆ ತಮಗೆ 160 ಶಾಸಕರ ಬೆಂಬಲವಿರುವ ಪತ್ರವನ್ನು ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ನೀಡಿದ್ದಾರೆ.
ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.
ರಾಜಿನಾಮೆ ಬಳಿಕ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಮನೆಗೆ ತೆರಳಿದ ನಿತೀಶ್ ಕುಮಾರ್ ಅವರು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪತ್ನಿ ರಾಬ್ರಿ ದೇವಿ ಅವರನ್ನು ಭೇಟಿ ಮಾಡಿದರು.
ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ ನಿತೀಶ್ ಕುಮಾರ್ ಮತ್ತು ಮಹಾಘಟಬಂಧನ್ ಗೆ ಬೇಷರತ್ ಬೆಂಬಲ ಘೋಷಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ