ಹೊಸದಿಲ್ಲಿ: ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಆರಂಭಿಸಿರುವ “ಹರ್ ಘರ್ ತಿರಂಗ” ಅಭಿಯಾನವನ್ನು ಬಹಿಷ್ಕರಿಸುವಂತೆ ಹಿಂದುತ್ವವಾದಿ ಯತಿ ನರಸಿಂಹಾನಂದ್ ಹಿಂದೂಗಳಿಗೆ ಕರೆ ನೀಡಿದ್ದಾರೆ.
ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ನಾಗರಿಕರನ್ನು ಉತ್ತೇಜಿಸಲು “ಹರ್ ಘರ್ ತಿರಂಗ” ಅಭಿಯಾನವನ್ನು ಪ್ರಾರಂಭಿಸಿದ್ದರು.
ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಈ ಹಿಂದೆ ಹಲವು ದ್ವೇಷದ ಭಾಷಣದ ಆರೋಪಿ ನರಸಿಂಗಾನಂದ, “ಈ ಅಭಿಯಾನವು ಮುಸ್ಲಿಂ ಒಡೆತನದ ಕಂಪನಿಗೆ ಲಾಭದಾಯಕವಾಗಿದೆ’ ಎಂದು ಹೇಳಿದ್ದಾರೆ.
”ಈ ಅಭಿಯಾನಕ್ಕಾಗಿ (ಧ್ವಜಗಳನ್ನು ತಯಾರಿಸುವ) ಆರ್ಡರ್ ಅನ್ನು ಪಶ್ಚಿಮ ಬಂಗಾಳದ ಸಲಾವುದ್ದೀನ್ ಒಡೆತನದ ಕಂಪನಿಗೆ ನೀಡಲಾಗಿದೆ’ ಎಂದು ಅವರು ಹೇಳಿದ್ದಾರೆ. “ಇದು ಹಿಂದೂಗಳ ವಿರುದ್ಧದ ಒಂದು ದೊಡ್ಡ ಪಿತೂರಿ. ನೀವು (ಹಿಂದೂಗಳು) ಜೀವಂತವಾಗಿರಲು ಬಯಸಿದರೆ, ಈ ಅಭಿಯಾನದ ಹೆಸರಿನಲ್ಲಿ ನಿಮ್ಮ ಹಣವನ್ನು ಮುಸ್ಲಿಮರಿಗೆ ನೀಡುವುದನ್ನು ನಿಲ್ಲಿಸಿ’ ಎಂದು ನರಸಿಂಹಾನಂದ ಹೇಳಿಕೆ ನೀಡಿದ್ದಾರೆ.
ಹಿಂದೂ ರಾಜಕಾರಣಿಗಳು ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕಾಗಿ ಪ್ರಚಾರ ಮಾಡುತ್ತಾರೆ, ಆದರೆ ಅಧಿಕಾರಕ್ಕೆ ಬಂದ ನಂತರ ಅವರಿಗೆ ಸರ್ಕಾರಿ ಗುತ್ತಿಗೆಗಳನ್ನು ನೀಡುತ್ತಾರೆ ಎಂದು ನರಸಿಂಹಾನಂದ ವೀಡಿಯೊದಲ್ಲಿ ಆರೋಪಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ