ಕನ್ನೌಜ್: ಕಳೆದ ತಿಂಗಳು ಕೋಮುಗಲಭೆಗೆ ಕಾರಣವಾಗಿದ್ದ ತಾಲ್ಗ್ರಾಮ್ ಪಟ್ಟಣದ ದೇವಸ್ಥಾನದಲ್ಲಿ ಮಾಂಸವನ್ನು ಎಸೆದಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಚಂಚಲ್ ತ್ರಿಪಾಠಿ ಪ್ರಮುಖ ಆರೋಪಿಯಾಗಿದ್ದು ಈತ ಕಟುಕನಾಗಿದ್ದ ಮನ್ಸೂರ್ ಕಸಾಯಿಗೆ 10 ಸಾವಿರ ರೂಪಾಯಿಗಳ ಆಮಿಷ ಒಡ್ಡಿ ಈ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಅನುಪಮ್ ಸಿಂಗ್ ಹೇಳಿದ್ದಾರೆ.
ಚಂಚಲ್ ತ್ರಿಪಾಠಿಗೆ ಆಗಿನ ಎಸ್ಎಚ್ಒ ಹರಿ ಶ್ಯಾಮ್ ಸಿಂಗ್ ಅವರೊಂದಿಗೆ ಉತ್ತಮ ಸಂಬಂಧ ಇರಲಿಲ್ಲ. ಹೀಗಾಗಿ ಅವರನ್ನು ಹುದ್ದೆಯಿಂದ ತೆಗೆದುಹಾಕಲು ಈ ರೀತಿಯ ಕುಕೃತ್ಯಕ್ಕೆ ಕೈಹಾಕಿದ್ದರು ಎಂದು ತಿಳಿಸಿದ್ದಾರೆ.
ಕಳೆದ ಜುಲೈ 16ರಂದು ದೇವಸ್ಥಾನದಲ್ಲಿ ಮಾಂಸದ ತುಂಡು ಪತ್ತೆಯಾದ ಹಿನ್ನಲೆಯಲ್ಲಿ ಕೋಮುಗಲಭೆ ಸೃಷ್ಟಿಯಾಗಿತ್ತು. ಅಲ್ಲದೆ ಒಂದು ಸಮುದಾಯಕ್ಕೆ ಸೇರಿದ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಇದುವರೆಗೆ 17 ಮಂದಿಯನ್ನು ಬಂಧಿಸಿದ್ದಾರೆ.
ಮನ್ಸೂರ್ ಕಸಾಯಿಯನ್ನು ಬಂಧಿಸಿದ ನಂತರ, ಘಟನೆಯ ದುರುದ್ದೇಶ ಹೊರಬಂದಿದೆ. ರಾನ್ವಾ ಗ್ರಾಮದ ನಿವಾಸಿ ಚಂಚಲ್ ತ್ರಿಪಾಠಿ ಮಾಂಸದ ತುಂಡುಗಳನ್ನು ದೇವಸ್ಥಾನದಲ್ಲಿ ಇಡುವಂತೆ ಹೇಳಿದ್ದರೂ ಎಂದು ಮನ್ಸೂರ್ ಪೊಲೀಸರಿಗೆ ತಿಳಿಸಿದ್ದಾರೆ.
ಇನ್ನು ಈ ಘಟನೆ ನಂತರ ಅಂದಿನ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಿಶ್ರಾ, ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಶ್ರೀವಾಸ್ತವ ಮತ್ತು ತಾಲ್ಗ್ರಾಮ್ ಪೊಲೀಸ್ ಠಾಣೆ ಪ್ರಭಾರಿ ಹರಿ ಶ್ಯಾಮ್ ಸಿಂಗ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ