ಕನ್ನೌಜ್: ಕಳೆದ ತಿಂಗಳು ಕೋಮುಗಲಭೆಗೆ ಕಾರಣವಾಗಿದ್ದ ತಾಲ್ಗ್ರಾಮ್ ಪಟ್ಟಣದ ದೇವಸ್ಥಾನದಲ್ಲಿ ಮಾಂಸವನ್ನು ಎಸೆದಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಚಂಚಲ್ ತ್ರಿಪಾಠಿ ಪ್ರಮುಖ ಆರೋಪಿಯಾಗಿದ್ದು ಈತ ಕಟುಕನಾಗಿದ್ದ ಮನ್ಸೂರ್ ಕಸಾಯಿಗೆ 10 ಸಾವಿರ ರೂಪಾಯಿಗಳ ಆಮಿಷ ಒಡ್ಡಿ ಈ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಅನುಪಮ್ ಸಿಂಗ್ ಹೇಳಿದ್ದಾರೆ.
ಚಂಚಲ್ ತ್ರಿಪಾಠಿಗೆ ಆಗಿನ ಎಸ್ಎಚ್ಒ ಹರಿ ಶ್ಯಾಮ್ ಸಿಂಗ್ ಅವರೊಂದಿಗೆ ಉತ್ತಮ ಸಂಬಂಧ ಇರಲಿಲ್ಲ. ಹೀಗಾಗಿ ಅವರನ್ನು ಹುದ್ದೆಯಿಂದ ತೆಗೆದುಹಾಕಲು ಈ ರೀತಿಯ ಕುಕೃತ್ಯಕ್ಕೆ ಕೈಹಾಕಿದ್ದರು ಎಂದು ತಿಳಿಸಿದ್ದಾರೆ.
ಕಳೆದ ಜುಲೈ 16ರಂದು ದೇವಸ್ಥಾನದಲ್ಲಿ ಮಾಂಸದ ತುಂಡು ಪತ್ತೆಯಾದ ಹಿನ್ನಲೆಯಲ್ಲಿ ಕೋಮುಗಲಭೆ ಸೃಷ್ಟಿಯಾಗಿತ್ತು. ಅಲ್ಲದೆ ಒಂದು ಸಮುದಾಯಕ್ಕೆ ಸೇರಿದ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಇದುವರೆಗೆ 17 ಮಂದಿಯನ್ನು ಬಂಧಿಸಿದ್ದಾರೆ.
ಮನ್ಸೂರ್ ಕಸಾಯಿಯನ್ನು ಬಂಧಿಸಿದ ನಂತರ, ಘಟನೆಯ ದುರುದ್ದೇಶ ಹೊರಬಂದಿದೆ. ರಾನ್ವಾ ಗ್ರಾಮದ ನಿವಾಸಿ ಚಂಚಲ್ ತ್ರಿಪಾಠಿ ಮಾಂಸದ ತುಂಡುಗಳನ್ನು ದೇವಸ್ಥಾನದಲ್ಲಿ ಇಡುವಂತೆ ಹೇಳಿದ್ದರೂ ಎಂದು ಮನ್ಸೂರ್ ಪೊಲೀಸರಿಗೆ ತಿಳಿಸಿದ್ದಾರೆ.
ಇನ್ನು ಈ ಘಟನೆ ನಂತರ ಅಂದಿನ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಿಶ್ರಾ, ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಶ್ರೀವಾಸ್ತವ ಮತ್ತು ತಾಲ್ಗ್ರಾಮ್ ಪೊಲೀಸ್ ಠಾಣೆ ಪ್ರಭಾರಿ ಹರಿ ಶ್ಯಾಮ್ ಸಿಂಗ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)