ಕನ್ನೌಜ್: ಕಳೆದ ತಿಂಗಳು ಕೋಮುಗಲಭೆಗೆ ಕಾರಣವಾಗಿದ್ದ ತಾಲ್ಗ್ರಾಮ್ ಪಟ್ಟಣದ ದೇವಸ್ಥಾನದಲ್ಲಿ ಮಾಂಸವನ್ನು ಎಸೆದಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಚಂಚಲ್ ತ್ರಿಪಾಠಿ ಪ್ರಮುಖ ಆರೋಪಿಯಾಗಿದ್ದು ಈತ ಕಟುಕನಾಗಿದ್ದ ಮನ್ಸೂರ್ ಕಸಾಯಿಗೆ 10 ಸಾವಿರ ರೂಪಾಯಿಗಳ ಆಮಿಷ ಒಡ್ಡಿ ಈ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಅನುಪಮ್ ಸಿಂಗ್ ಹೇಳಿದ್ದಾರೆ.
ಚಂಚಲ್ ತ್ರಿಪಾಠಿಗೆ ಆಗಿನ ಎಸ್ಎಚ್ಒ ಹರಿ ಶ್ಯಾಮ್ ಸಿಂಗ್ ಅವರೊಂದಿಗೆ ಉತ್ತಮ ಸಂಬಂಧ ಇರಲಿಲ್ಲ. ಹೀಗಾಗಿ ಅವರನ್ನು ಹುದ್ದೆಯಿಂದ ತೆಗೆದುಹಾಕಲು ಈ ರೀತಿಯ ಕುಕೃತ್ಯಕ್ಕೆ ಕೈಹಾಕಿದ್ದರು ಎಂದು ತಿಳಿಸಿದ್ದಾರೆ.
ಕಳೆದ ಜುಲೈ 16ರಂದು ದೇವಸ್ಥಾನದಲ್ಲಿ ಮಾಂಸದ ತುಂಡು ಪತ್ತೆಯಾದ ಹಿನ್ನಲೆಯಲ್ಲಿ ಕೋಮುಗಲಭೆ ಸೃಷ್ಟಿಯಾಗಿತ್ತು. ಅಲ್ಲದೆ ಒಂದು ಸಮುದಾಯಕ್ಕೆ ಸೇರಿದ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಇದುವರೆಗೆ 17 ಮಂದಿಯನ್ನು ಬಂಧಿಸಿದ್ದಾರೆ.
ಮನ್ಸೂರ್ ಕಸಾಯಿಯನ್ನು ಬಂಧಿಸಿದ ನಂತರ, ಘಟನೆಯ ದುರುದ್ದೇಶ ಹೊರಬಂದಿದೆ. ರಾನ್ವಾ ಗ್ರಾಮದ ನಿವಾಸಿ ಚಂಚಲ್ ತ್ರಿಪಾಠಿ ಮಾಂಸದ ತುಂಡುಗಳನ್ನು ದೇವಸ್ಥಾನದಲ್ಲಿ ಇಡುವಂತೆ ಹೇಳಿದ್ದರೂ ಎಂದು ಮನ್ಸೂರ್ ಪೊಲೀಸರಿಗೆ ತಿಳಿಸಿದ್ದಾರೆ.
ಇನ್ನು ಈ ಘಟನೆ ನಂತರ ಅಂದಿನ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಿಶ್ರಾ, ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಶ್ರೀವಾಸ್ತವ ಮತ್ತು ತಾಲ್ಗ್ರಾಮ್ ಪೊಲೀಸ್ ಠಾಣೆ ಪ್ರಭಾರಿ ಹರಿ ಶ್ಯಾಮ್ ಸಿಂಗ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ