ರಾಸಲ್ ಖೈಮಾ :ಭಾರತ ದೇಶಾದ್ಯಂತ ನಡೆದ ಆಗಸ್ಟ್ 15 ರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭ ಸಂಭ್ರಮದ ಸಂಧರ್ಭದಲ್ಲಿ ಅನಿವಾಸಿ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಪೌಂಡೇಶನ್ (ಕೆ.ಸಿ.ಎಫ್) ರಾಸಲ್ ಖೈಮಾ ಝೋನ್ ಅದ್ದೂರಿಯಾಗಿ ಸ್ವಾತಂತ್ರ್ಯ ದಿನವನ್ನು ಆಚರಿಸಿದೆ.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಐಕ್ಯತೆ ಹೆಚ್ಚು ಮಹತ್ವವನ್ನು ಹೊಂದಿದೆ ಇಲ್ಲಿ ಜಾತಿ, ಭೇದ, ವರ್ಣ ನೀತಿಗೆ ಅವಕಾಶ ಇರುವುದಿಲ್ಲ. ಆದರೂ ರಾಜಕೀಯ ಪ್ರೇರಿತ ಶಕ್ತಿಗಳಿಂದ ದೇಶದ ಐಕ್ಯತೆಗೆ ಧಕ್ಕೆಯಾಗುತ್ತಿದೆ. ಇದನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಏಕ ಕಂಠದಿಂದ ಎದುರಿಸಿ ಪ್ರಭುತ್ವದ ಮಹತ್ವವನ್ನು ಸಾರಬೇಕು ಎಂಬ ಸಂದೇಶ ದೊಂದಿಗೆ ಸ್ವಾಗತ ಭಾಷಣ ನಿರ್ವಹಿಸಿದ ಅಫ್ಝಲ್ ಮಂಗಳೂರು ಆಗ್ರಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿರ್ವಹಿಸಿದ ಹನೀಫ್ ಮುಸ್ಲಿಯಾರ್ ಮಾತನಾಡಿ, ಭಾರತೀಯತೆ ಪ್ರತಿಯೊಬ್ಬ ಮುಸ್ಲಿಮನ ವಿಶ್ವಾಸದ ಭಾಗವಾಗಿದೆ, ಅನ್ಯೋನ್ಯತೆಯ ಬದುಕು ಬದುಕಿ ಭಾರತವನ್ನು ಸುಂದರಗೊಳಿಸುವುದು ಯುವಕರ ಕರ್ತವ್ಯವಾಗಿದೆ, ರಾಜಕೀಯವನ್ನು ರಾಷ್ಟ್ರದ ಅಭಿವೃದ್ದಿಗಾಗಿ ಮಾತ್ರ ಬಳಸಬೇಕು ಎಂದು ಹೇಳಿದ ಅವರು ಧರ್ಮದ ಹೆಸರಿನಲ್ಲಿ ಕಚ್ಚಾಟ ನಡೆಸಿ ರಾಜಕೀಯ ಹೆಣಗಳಾಗಿ ಉರುಳಬೇಕಾದವರಲ್ಲ ಯುವಕರು ಎಂದು ಸಲಹೆ ನೀಡಿದರು.

ಮುಹಮ್ಮದ್ ಅಲಿ ಹೆಜಮಾಡಿ, ಇಸ್ಮಾಯಿಲ್ ಮುಸ್ಲಿಯಾರ್ ಕೊಡಗು, ಸಲಾಂ ಕಕ್ಕಿಂಜೆ, ಝೈನುದ್ಧೀನ್ ಮಡಿಕೇರಿ, ಹಾರಿಸ್ ಈಶ್ವರಮಂಗಳ, ನಿಯಾಝ್ ಬಾಕಿಮಾರು ಸೇರಿದಂತೆ ಇತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಸಲ್ ಖೈಮಾದ ಪ್ರತಿಷ್ಠಿತ ಜ್ಯೂಸ್ ವರ್ಲ್ಡ್ ನಲ್ಲಿ ನಡೆದ ಕಾರ್ಯಕ್ರಮವು ರಾಷ್ಟ್ರ ಗೀತೆ ಯೊಂದಿಗೆ ಸಮಾರೋಪ ಗೊಂಡಿತು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ