ಬೆಳ್ಳಾರೆ : ದಾರುಲ್ ಹಿಕ್ಮ ಇಂಗ್ಲಿಷ್ ಮೀಡಿಯಂ ಸ್ಕೂಲ್ ಬೆಳ್ಳಾರೆ ಇದರ ಆವರಣದಲ್ಲಿ ಸಂಭ್ರಮದ 75 ನೇ ಸ್ವಾತಂತ್ರೋತ್ಸವನ್ನು ಆಚರಿಸಲಾಯಿತು. ದಾರುಲ್ ಹಿಕ್ಮ ಸೌದಿ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ರಶೀದ್ ಬೆಳ್ಳಾರೆ ಅವರು ಧ್ವಜಾರೋಹಣ ವನ್ನು ಮಾಡಿದರು.


ಮುಖ್ಯ ಅತಿಥಿಯಾಗಿ ಆಗಮಿಸಿದ ಸಾಲಿಹ್ ಬೆಳ್ಳಾರೆ ಸ್ವಾತಂತ್ರ್ಯ ಹೋರಾಟ ಮತ್ತು ಸಧ್ಯದ ಭಾರತ ಪರಿಸ್ಥಿತಿ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕೇಂದ್ರ ಸಮಿತಿಯ ಕೋಶಾಧಿಕಾರಿ ಹಮೀದ್ ಆಲ್ಫಾ ವಹಿಸಿದರು . ಆಜಾದಿ ಅಮೃತ ಮಹೋತ್ಸವವಾದ ಅಂಗವಾಗಿ ರಾಷ್ಟ್ರೀಯತೆ ಮತ್ತು ರಾಷ್ಟ್ರಪ್ರೇಮ ವನ್ನು ಜಾಗೃತಿಗೊಳಿಸಲು ಶಾಲಾ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಭಾಷಣ ಸ್ಪರ್ಧೆ, ಛದ್ಮ ವೇಷ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ನಡೆಯಿತು. ವಿಜಯಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಹಸ್ಸನ್ ಹಾಜಿ ಇಂದ್ರಾಜೆ, ಹನೀಫ್ ಬಿಸ್ಮಿಲ್ಲಾ , ಅಬೂಬಕ್ಕರ್ ಸೆಲೆಕ್ಟ್ , ಶರೀಫ್ ಕರ್ನಾಟಕ ಫರ್ನಿಚರ್ , ಮುನೀರ್ ಬೆಳ್ಳಾರೆ, ಉಮರ್ ಮಿಸ್ಬಾಹಿ, ಅಬೂಬಕ್ಕರ್ ಮುಚ್ಚಿಲ ಹಾಜರಿದ್ದರು. ಕಾರ್ಯಕ್ರವನ್ನು ಶಾಲಾನಾಯಕಿ ರಿಝ ಫಾತಿಮಾ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ