ಸೌದಿ ಅರೇಬಿಯಾ: ಜುಬೈಲ್ ನಲ್ಲಿ ಮೃತಪಟ್ಟ ಬಂಟ್ವಾಳ ತಾಲ್ಲೂಕಿನ ಗೂಡಿನಬಳಿ ನಿವಾಸಿ ಮುಹಮ್ಮದ್ ಗೌಸ್ (ಕಿಡಾವು) ಎಂಬವರ ಅಂತ್ಯಕ್ರಿಯೆಯು ಆಗಸ್ಟ್ 15 ರ ಸೋಮವಾರದಂದು ಜುಬೈಲ್ ನ ಖಬರ್ ಸ್ಥಾನದಲ್ಲಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಕೆಸಿಎಫ್ ಸದಸ್ಯರ ಸಮ್ಮುಖದಲ್ಲಿ ದುವಾಮೂಲಕ ನೆರೆವೇರಿಸಲಾಯ್ತು.

ಮೂರು ತಿಂಗಳ ಮುಂಚೆ ಕುಟುಂಬಸ್ಥರನ್ನು ಭೇಟಿಯಾಗಲು ವಿಸಿಟ್ ವೀಸಾ ಮೂಲಕ ಸೌದಿ ಅರೇಬಿಯಾಕ್ಕೆ ಆಗಮಿಸಿದವರು, ಅನಾರೋಗ್ಯದ ಕಾರಣದಿಂದ ಇನ್ನೆರಡು ದಿನಗಳಲ್ಲಿ ಊರಿಗೆ ಹೋಗಲು ಎಲ್ಲಾ ಸಿದ್ಧತೆಯನ್ನು ನಡೆಸಿದ್ದರು. ಆದರೆ ಅಲ್ಲಾಹನ ಅನುಲ್ಲಂಘನೀಯ ವಿಧಿಗೆ ವಿಧೇಯರಾಗಿ ದಿನಾಂಕ 11.08.2022 ರ ಗುರುವಾರದಂದು ತಮ್ಮ ಪುತ್ರನ ಸ್ವಗೃಹದಲ್ಲಿ ಮೃತಪಟ್ಟಿದ್ದರು.
ಮೃತರ ಅಂತ್ಯ ಸಂಸ್ಕಾರಕ್ಕೆ ಬೇಕಾದ ದಾಖಲೆ ಪತ್ರಗಳು, ಭಾರತೀಯ ರಾಯಭಾರಿ ಕಛೇರಿಗೆ ಬೇಕಾದ ಕಡತಗಳು ಹಾಗೂ ಇನ್ನಿತರ ಎಲ್ಲಾ ವ್ಯವಸ್ಥೆಯನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ನಾಯಕರ ನೇತೃತ್ವದಲ್ಲಿ ಸರಿಪಡಿಸಿದ್ದರು.
ಈ ಒಂದು ಪುಣ್ಯ ಕಾರ್ಯದಲ್ಲಿ ಕೈಜೋಡಿಸಿ ಸಹಕರಿಸಿದ ಕೆ.ಸಿ.ಎಫ್ ಜುಬೈಲ್ ಝೋನ್ ಸಾಂತ್ವನ ಇಲಾಖೆಯ ನಾಯಕರು, ದಮ್ಮಾಮ್ ಝೋನ್ ಸಾಂತ್ವನ ಇಲಾಖೆಯ ನಾಯಕರು ಮತ್ತು ಇತರ ಎಲ್ಲಾ ನಾಯಕರುಗಳಿಗೆ ಹಾಗೂ ಹಿತೈಶಿಗಳಿಗೆ ಕೆಸಿಎಫ್ ಜುಬೈಲ್ ಸಮಿತಿಯ ಸಾಂತ್ವಾನ ವಿಭಾಗವು ಎಲ್ಲಾ ವಿಧದ ಕೃತಜ್ಞತೆಗಳನ್ನು ಸಲ್ಲಿಸಿರುವುದಾಗಿ ಈ ಮೂಲಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಸಾಂತ್ವನ ವಿಭಾಗ*
ಕೆ.ಸಿ.ಎಫ್ ಜುಬೈಲ್ ಝೋನ್✍🏻
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ