ದುಬೈ : ಅನಿವಾಸಿ ಕೊಡಗಿನ ಸಾಮಾಜಿಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಒಕ್ಕೂಟವಾದ ಕೊಡಗು ಸುನ್ನೀ ವೆಲ್ಫೇರ್ ಅಸೋಸಿಯೇಷನ್ ಯುಎಇ ವತಿಯಿಂದ ದುಬೈಯ ದೇರಾದಲ್ಲಿರುವ ಕೇಂದ್ರ ಕಚೇರಿಯಲ್ಲಿ ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು KSWA ಜಿಸಿಸಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಕೊಟ್ಟಮುಡಿ ವಹಿಸಿದರು.ಉದ್ಘಾಟನೆಯನ್ನು ಜಲೀಲ್ ನಿಝಾಮಿ ಎಮ್ಮೆಮಾಡು ನಿರ್ವಹಿಸಿದರೆ, ಶಾಫಿ ಸಖಾಫಿ ಕೊಂಡಂಗೇರಿ ಸಂದೇಶ ಭಾಷಣ ಮಾಡಿದರು.
ಸಂಘಟನೆಯ ಸಂಚಾಲಕ ಇಸ್ಮಾಯಿಲ್ ಮೂರ್ನಾಡು ಮಾತನಾಡಿ ನಾವೆಲ್ಲರೂ ಭಾರತೀಯರು ಆದರೆ ವಿದೇಶದಲ್ಲಿ ವೃತ್ತಿಯಲ್ಲಿ ತೊಡಗಿಸಿಕೊಂಡವರು ಆದರೂ ಕೂಡ ನಮ್ಮ ದೇಶದ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಾವು ಇಲ್ಲಿ ಇಂದು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.
ನಮ್ಮ ಸಂವಿಧಾನ ರಕ್ಷಣೆ, ಜಾತ್ಯಾತೀತ ಮನೋಭಾವವನ್ನು ನಾವು ಬೆಳಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ, ಸುದ್ದಿಗೋಷ್ಠಿಗಳಲ್ಲಿ ರಾಷ್ಟ್ರ ಪ್ರೇಮದ ಬಗ್ಗೆ ಮಾತನಾಡುತ್ತಾ ಕೆಲವರು ಅನಿವಾಸಿಗಳಾದ ನಮಗೆ ರಾಷ್ಟ್ರ ಪ್ರೇಮದ ಪಾಠ ಹೇಳಿಕೊಡುತಿದ್ದಾರೆ. ನಮಗೆ ರಾಷ್ಟ್ರದ ಬಗ್ಗೆ ಗೌರವವಿದೆ. ಯಾರ ಪಾಠ ಪ್ರವಚನಗಳ ಅಗತ್ಯವಿಲ್ಲವೆಂದರು.

ಈ ಸಂದರ್ಭ ಕೊಡಗಿನ ಅನಿವಾಸಿಗಳಾದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.ಕೋಶಾಧಿಕಾರಿ ಅಹ್ಮದ್ ಚಾಮಿಯಾಲ್, ಕ್ಯಾಬಿನೆಟ್ ನಾಯಕರಾದ ರಫೀಕ್ ಚಾಮಿಯಾಲ್, ಹಾರಿಸ್ ಕುಂಜಿಲ, ಸಲೀಂ ಗುಂಡಿಕೆರೆ, ಮುಝಮ್ಮಿಲ್ ಚಾಮಿಯಾಲ, ಝುಬೈರ್ ಎಮ್ಮೆಮಾಡು,, ಅಲಿ ಎಮ್ಮೆಮಾಡು, ಅಶ್ರಫ್ ಕುಂಜಿಲ ಸೇರಿದಂತೆ ಹಲವು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ರಿಯಾಝ್ ಕೊಂಡಂಗೇರಿ ಸ್ವಾಗತ ಹಾಗೂ ಕಾರ್ಯದರ್ಶಿ ಮುಜೀಬ್ ಕಡಂಗ ವಂದನಾರ್ಪಣೆ ನಿರ್ವಹಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ