ಬೆಂಗಳೂರು: ರಾಜ್ಯಾದ್ಯಂತ ಮಸೀದಿಯಲ್ಲಿ ಧ್ವನಿವರ್ಧಕ ಮೂಲಕ ಆಜಾನ್ ಕೂಗುವುದಕ್ಕೆ ನಿರ್ಬಂಧ ಹೇರಲು ಸರ್ಕಾರಿ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಹೈಕೋರ್ಟ್,ಆಜಾನ್ನಿಂದ ಜನರ ಮೂಲಭೂತ ಹಕ್ಕು ಮೊಟಕುಗೊಳ್ಳುವುದಿಲ್ಲ ಎಂದು ಹೇಳಿದೆ.
ಧ್ವನಿವರ್ಧಕಗಳು ನಿಗದಿತ ಡೆಸಿಬಲ್ಗಿಂತ ಹೆಚ್ಚಿನ ಶಬ್ದವಾಗದಂತೆ ಸರ್ಕಾರಿ ಪ್ರಾಧಿಕಾರಗಳು ಅಗತ್ಯ ಕ್ರಮ ಜರುಗಿಸಬೇಕು ಎಂದು ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿದೆ.
ಈ ಕುರಿತು ನಗರದ ನಾಗರಭಾವಿ ನಿವಾಸಿ ಆರ್. ಚಂದ್ರಶೇಖರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ಪೀಠ, ಆಜಾನ್ ಕೂಗುವುದರಿಂದ ಉಂಟಾಗುವ ಶಬ್ದದಿಂದಾಗಿ ಇತರ ಜನರ ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗುತ್ತದೆ ಎಂಬ ಅರ್ಜಿದಾರರ ವಾದವನ್ನು ನಿರಾಕರಿಸಿದೆ.
ಸಂವಿಧಾನದ ಪರಿಚ್ಛೇದ 25(1)ರ ಅಡಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಧರ್ಮವನ್ನು ಆಚರಿಸುವ, ಪ್ರದರ್ಶಿಸುವ ಮತ್ತು ಪ್ರಚಾರ ಮಾಡುವ ಹಕ್ಕು ಹೊಂದಿರುತ್ತಾನೆ ಎಂದು ತಿಳಿಸಿದೆ.
ಅರ್ಜಿದಾರರು ಸೇರಿದಂತೆ ಪ್ರತಿಯೊಬ್ಬರೂ ಸಹ ತಮ್ಮ ಧರ್ಮ ಆಚರಿಸಬಹುದು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆಜಾನ್ ಎಂಬುದು ಇಸ್ಲಾಂ ಧರ್ಮದವರಿಗೆ ಪ್ರಾರ್ಥನೆ ಸಲ್ಲಿಸಲು ನೀಡುವ ಕರೆ ಎಂದು ಹೈಕೋರ್ಟ್ ಇದೇ ವೇಳೆ ಹೇಳಿದೆ.
ಅರ್ಜಿದಾರರು ಸೇರಿದಂತೆ ಪ್ರತಿಯೊಬ್ಬರೂ ಸಹ ತಮ್ಮ ಧರ್ಮ ಆಚರಿಸಬಹುದು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆಜಾನ್ ಎಂಬುದು ಇಸ್ಲಾಂ ಧರ್ಮದವರಿಗೆ ಪ್ರಾರ್ಥನೆ ಸಲ್ಲಿಸಲು ನೀಡುವ ಕರೆ ಮತ್ತು ಅರ್ಜಿದಾರರೇ ತಮ್ಮ ಅರ್ಜಿಯಲ್ಲಿ ಹೇಳಿರುವಂತೆ ಇಸ್ಲಾಂ ಧರ್ಮದ ವ್ಯಕ್ತಿಗೆ ಆಜಾನ್ ಎಂಬುದು ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿತು.
ಆಜಾನ್ ಕೂಗುವುದು ಮುಸ್ಲಿಮರ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದ್ದರೂ, ಅದರಲ್ಲಿ ಬಳಸುವ ಅಲ್ಲಾಹು ಅಕ್ಬರ್ (ಅಲ್ಲಾಹನೇ ಸರ್ವಶ್ರೇಷ್ಠ) ಎಂಬ ಶಬ್ದ ಇತರರ ಧಾರ್ಮಿಕ ನಂಬಿಕಗಳಿಗೆ ಧಕ್ಕೆ ತರುತ್ತದೆ. ಆದ್ದರಿಂದ ರಾಜ್ಯಾದ್ಯಂತ ಮಸೀದಿಯಲ್ಲಿ ಧ್ವನಿವರ್ಧಕ ಮೂಲಕ ಆಜಾನ್ ಕೂಗುವುದಕ್ಕೆ ನಿರ್ಬಂಧ ಹೇರಲು ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ