ನವದೆಹಲಿ,ಆಗಸ್ಟ್.30: ಚಾಮರಾಜಪೇಟೆಯ ವಖ್ಫ್ ಅಧೀನದ ಈದ್ಗಾ ಮೈದಾನದಲ್ಲಿ 2 ದಿನಗಳ ಕಾಲ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದೆ.
ಈದ್ಗಾ ಮೈದಾನವೆಂದು ವಕ್ಫ್ ಬೋರ್ಡ್ ಪ್ರತಿಪಾದಿಸುತ್ತಿದ್ದ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಅನುಮತಿ ನೀಡಿದ್ದನ್ನು ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಪ್ರತಿಯಾಗಿ ರಾಜ್ಯ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ಮೈದಾನದಲ್ಲಿ ಯಾವುದೇ ಶಾಶ್ವತ ಕಟ್ಟಡ ನಿರ್ಮಾಣ ಮಾಡುವುದಿಲ್ಲ. ರಾಜ್ಯ ಸರ್ಕಾರವೇ ಕಾನೂನು ಸುವ್ಯವಸ್ಥೆಯನ್ನು ಗಮನಿಸುತ್ತದೆ. ಆದ್ದರಿಂದ ಗಣೇಶೋತ್ಸವಕ್ಕೆ ಅನುಮತಿ ನೀಡಬೆಕು ಎಂದು ತುಷಾರ್ ಮೆಹ್ತಾ ಕೋರ್ಟ್ ಗೆ ಮನವಿ ಮಾಡಿದರು.
ಆದರೆ ವಕ್ಫ್ ಬೋರ್ಡ್ ಪರ ಕಪಿಲ್ ಸಿಬಲ್, ದುಷ್ಯಂತ್ ದವೆ ಮಂಡಿಸಿದ ವಾದವನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ನ ತ್ರಿಸದಸ್ಯಪೀಠ, ಇನ್ನು 2 ದಿನಗಳ ಕಾಲ ಮೈದಾನದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಬೇಕು, ಈದ್ಗಾ ಬಿಟ್ಟು ಬೇರೆಡೆ ಗಣೇಶೋತ್ಸವ ಆಚರಿಸಲೂ ಸುಪ್ರೀಂ ಸೂಚಿಸಿದೆ. ಅಲ್ಲದೇ ಹೈಕೋರ್ಟ್ನಲ್ಲಿ ಹೊಸ ಏಕಸದಸ್ಯ ಪೀಠ ರಚಿಸಿ ಈ ವಿಚಾರಣೆ ಮುಂದುವರೆಸಿ, ಅಲ್ಲೇ ಪ್ರಕರಣ ಇತ್ಯರ್ಥಪಡಿಸುವಂತೆ ಆದೇಶಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠವು ಮಂಗಳವಾರ ಈ ವಿಷಯವಾಗಿ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ. ನಂತರ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಅಭಯ್ ಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವನ್ನು ರಚಿಸಿದ್ದರು.
ಈ ಹಿಂದೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಿದ್ದ ಹೈಕೋರ್ಟ್ ಆಗಸ್ಟ್ 31 ರಿಂದ ನಿರ್ದಿಷ್ಟ ಅವಧಿಗೆ ಮಾತ್ರ ಅನುಮತಿ ನೀಡಿತ್ತು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)