ನವದೆಹಲಿ,ಆಗಸ್ಟ್.30: ಚಾಮರಾಜಪೇಟೆಯ ವಖ್ಫ್ ಅಧೀನದ ಈದ್ಗಾ ಮೈದಾನದಲ್ಲಿ 2 ದಿನಗಳ ಕಾಲ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದೆ.
ಈದ್ಗಾ ಮೈದಾನವೆಂದು ವಕ್ಫ್ ಬೋರ್ಡ್ ಪ್ರತಿಪಾದಿಸುತ್ತಿದ್ದ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಅನುಮತಿ ನೀಡಿದ್ದನ್ನು ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಪ್ರತಿಯಾಗಿ ರಾಜ್ಯ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ಮೈದಾನದಲ್ಲಿ ಯಾವುದೇ ಶಾಶ್ವತ ಕಟ್ಟಡ ನಿರ್ಮಾಣ ಮಾಡುವುದಿಲ್ಲ. ರಾಜ್ಯ ಸರ್ಕಾರವೇ ಕಾನೂನು ಸುವ್ಯವಸ್ಥೆಯನ್ನು ಗಮನಿಸುತ್ತದೆ. ಆದ್ದರಿಂದ ಗಣೇಶೋತ್ಸವಕ್ಕೆ ಅನುಮತಿ ನೀಡಬೆಕು ಎಂದು ತುಷಾರ್ ಮೆಹ್ತಾ ಕೋರ್ಟ್ ಗೆ ಮನವಿ ಮಾಡಿದರು.
ಆದರೆ ವಕ್ಫ್ ಬೋರ್ಡ್ ಪರ ಕಪಿಲ್ ಸಿಬಲ್, ದುಷ್ಯಂತ್ ದವೆ ಮಂಡಿಸಿದ ವಾದವನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ನ ತ್ರಿಸದಸ್ಯಪೀಠ, ಇನ್ನು 2 ದಿನಗಳ ಕಾಲ ಮೈದಾನದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಬೇಕು, ಈದ್ಗಾ ಬಿಟ್ಟು ಬೇರೆಡೆ ಗಣೇಶೋತ್ಸವ ಆಚರಿಸಲೂ ಸುಪ್ರೀಂ ಸೂಚಿಸಿದೆ. ಅಲ್ಲದೇ ಹೈಕೋರ್ಟ್ನಲ್ಲಿ ಹೊಸ ಏಕಸದಸ್ಯ ಪೀಠ ರಚಿಸಿ ಈ ವಿಚಾರಣೆ ಮುಂದುವರೆಸಿ, ಅಲ್ಲೇ ಪ್ರಕರಣ ಇತ್ಯರ್ಥಪಡಿಸುವಂತೆ ಆದೇಶಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠವು ಮಂಗಳವಾರ ಈ ವಿಷಯವಾಗಿ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ. ನಂತರ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಅಭಯ್ ಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವನ್ನು ರಚಿಸಿದ್ದರು.
ಈ ಹಿಂದೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಿದ್ದ ಹೈಕೋರ್ಟ್ ಆಗಸ್ಟ್ 31 ರಿಂದ ನಿರ್ದಿಷ್ಟ ಅವಧಿಗೆ ಮಾತ್ರ ಅನುಮತಿ ನೀಡಿತ್ತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ