ಕಾರ್ಕಳ, ಸೆ.1: ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ದಅವಾ ಕಾನ್ಫರೆನ್ಸ್ ಇತ್ತೀಚೆಗೆ ತ್ವೆಬಾ ಗಾರ್ಡನ್ ಬಂಗ್ಲಗುಡ್ಡೆಯಲ್ಲಿ ಜಿಲ್ಲಾ ದಅವಾ ಕಾರ್ಯದರ್ಶಿ ಶಾಹುಲ್ ಹಮೀದ್ ನಈಮಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಯ್ಯಿದ್ ಜವಾದ್ ತಂಙಳ್ ರವರ ದುಆದೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ಸಯ್ಯಿದ್ ಫಝಲ್ ಜಿಫ್ರಿ ತಂಙಳ್ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಎಸ್ಸೆಸ್ಸೆಫ್ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ಝೈನುಲ್ ಆಬಿದ್ ಸಖಾಫಿ ಮಾಗುಂಡಿ, ತ್ವೈಬಾ ಗಾರ್ಡನ್ ಬಂಗ್ಲಗುಡ್ಡೆ ಇದರ ಎಜ್ಯುಕೇಶನ್ ಡೈರಕ್ಟರ್ ಇಸ್ಮಾಯಿಲ್ ಸರ್ ಮಂಚಿ, ಉತ್ತಮ ತರಬೇತಿಯನ್ನು ನೀಡಿದರು.

ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಕೋಶಾಧಿಕಾರಿ ಅಲ್ತಾಫ್ ಬಂಗ್ಲಗುಡ್ಡೆ, ಮಾದ್ಯಮ ಕಾರ್ಯದರ್ಶಿ ಮುಹಮ್ಮದ್ ಸಮೀರ್ ಕೋಡಿ, ಕ್ಯೂಡಿ ಕಾರ್ಯದರ್ಶಿ ನವಾಝ್ ಕಾರ್ಕಳ, ಎಸ್ಸೆಸ್ಸೆಫ್ ಕಾರ್ಕಳ ಡಿವಿಷನ್ ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಅಂಜದಿ ಕಂಪಾನ್ ಉಪಸ್ಥಿತಿಯಿದ್ದರು.

ಕನ್ನಂಗಾರ್, ಮೂಳೂರ್, ಹಂಗಳೂರು, ಬಂಗ್ಲಗುಡ್ಡೆ ಸೇರಿದಂತೆ ನೂರಕ್ಕೂ ಮಿಕ್ಕ ದಅವಾ ವಿಧ್ಯಾರ್ಥಿಗಳು ಭಾಗವಹಿಸಿದ್ದರು.
ಜಿಲ್ಲಾ ಪಬ್ಲಿಕೇಷನ್ ಕಾರ್ಯದರ್ಶಿ ಅನೀಸ್ ಸರ್ಹಿಂದಿ ಅಲ್ ಫಾಳಿಲಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ