ಪ್ರಧಾನಿ ಮೋದಿಯವರು ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುವ ಪ್ರಮುಖ ಉದ್ದೇಶ ಜಿಲ್ಲೆಯ ನಿರೀಕ್ಷಿತ ರಾಜಕೀಯ ಬೆಳವಣಿಗೆ ಹೊರತು, ಯಾವುದೇ ಅಭಿವೃದ್ಧಿ ಉದ್ದೇಶ ಅಲ್ಲ ಎಂದು ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ, ಮಾಜಿ ಮೇಯರ್ ಕೆ.ಅಶ್ರಫ್, ಹೇಳಿದ್ದಾರೆ.
ಜಿಲ್ಲೆಯಲ್ಲಿ ನಿರಂತರ ಮತೀಯ ಉದ್ವಿಗ್ನತೆ ಯಿಂದ ಜರ್ಜರಿತ ಗೊಂಡು ಬೃಹತ್ ಉದ್ದಿಮೆಗಳು ನಿಶ್ಶಬ್ದವಾಗಿ ವಲಸೆ ಆರಂಭಿಸಿದ್ದು, ಆರ್ಥಿಕ ಚಟುವಟಿಕೆ ಇತ್ಯಾದಿ ಕುಸಿತವಾಗಿದೆ. ಆಡಳಿತದಲ್ಲಿರುವ ಬಿ.ಜೆ. ಪಿ ಗೆ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿದೆ. ಕರ್ನಾಟಕ ಸರಕಾರ ಈ ಹಿಂದೆ ಶಾಲಾ ವಿಷಯದಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪಠ್ಯವನ್ನು ತೆರವು ಗೊಳಿಸಿದ ಕಾರಣಕ್ಕಾಗಿಯೇ ರಾಜ್ಯದ ಜನರ ವಿರೋಧವನ್ನು ಕಟ್ಟಿ ಕೊಳ್ಳ ಬೇಕಾಯಿತು ಎಂದರು.
ಕಳೆದ ತಿಂಗಳು ಸುಳ್ಯದ ವಿವಿಧ ಹತ್ಯಾ ಪ್ರಕರಣದ ಬೆಳವಣಿಗೆ ಪರಿಣಾಮವಾಗಿ ಜಿಲ್ಲೆಯ ಪರಿಗಣನಾತ್ಮಕ ಸಮುದಾಯ ಮತ್ತು ಪಕ್ಷದ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲುರವರ ವಿರುದ್ಧ ನಿಲ್ಲಬೇಕಾಯಿತು. ಪರಿಸ್ಥಿಯನ್ನು ತೇಪೆ ಹಚ್ಚಲು ಪ್ರಧಾನಿ ನರೇಂದ್ರ ಮೋದಿಯನ್ನು ಜಿಲ್ಲೆಗೆ ಆಮಂತ್ರಿಸಿ ಪಕ್ಷಕ್ಕೆ ಆದ ನಷ್ಟವನ್ನು ಸರಿ ದೂಗಿಸುವ ಪ್ರಯತ್ನದ ಭಾಗವೇ ಮಂಗಳೂರಿಗೆ ಮೋದಿ ಆಗಮನದ ವ್ಯವಸ್ಥೆ.
ಪ್ರಧಾನ ಮಂತ್ರಿ ಮೋದಿಯವರು ಜಿಲ್ಲೆಗೆ ಆಗಮಿಸುವುದರಲ್ಲಿ ಸರ್ವರಿಗೂ ಸಹಮತ ಇದೆ. ಆದರೆ, ಅಂದು ನರೇಂದ್ರ ಮೋದಿಯವರು ಜಿಲ್ಲೆಗೆ ಗುಪ್ತವಾಗಿ ಆಗಮಿಸಿ ಯಾವುದೇ ಸಾರ್ವಜನಿಕ ಕಾರ್ಯಕ್ರಮ ನಡೆಸದೇ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿ ಹೋಗಿದ್ದು ಜನರು ಇನ್ನೂ ಮರೆತಿಲ್ಲ.
ಮೋದಿಯವರು ಈ ಬಾರಿ ಮಂಗಳೂರಿಗೆ ಭೇಟಿ ನೀಡುವ ಈ ಸಂದರ್ಭದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸ್ಥಾಪಿತ ಕುದ್ರೋಳಿ ಕ್ಷೇತ್ರಕ್ಕೇ ಭೇಟಿ ನೀಡಲಿ.
ರಾಜ್ಯ ಸರಕಾರ ಈ ಹಿಂದೆ ಶ್ರೀ ನಾರಾಯಣ ಗುರುಸ್ವಾಮಿ ಯವರ ಜೀವನ ಚರಿತ್ರೆ ಮತ್ತು ದಾರ್ಶನಿಕತೆ ಪ್ರತಿಪಾದಿಸುವ ಪಠ್ಯವನ್ನು ತೆರವು ಗೊಳಿಸಲು ಪ್ರಯತ್ನಿಸಿದ ಷಡ್ಯಂತ್ರಕ್ಕೆ ಪ್ರಾಯಶ್ಚಿತ ವಾದರೂ ಆಗಲಿ.
ಜಿಲ್ಲೆಯ ಸಂಸದರು, ಉಸ್ತುವಾರಿ ಸಚಿವರು, ನಾಮ ನಿರ್ದೇಶಿತ ಸಂಸದರು, ಶಾಸಕರು, ಪಕ್ಷದ ಮುಖಂಡರು ಸರ್ವರೂ ಪ್ರಧಾನಿಯವರ ಮನವೊಲಿಸಿ ಕುದ್ರೋಳಿ ಕ್ಷೇತ್ರಕ್ಕೆ ಪ್ರಧಾನಿಯವರನ್ನು ಭೇಟಿ ಮಾಡುವ. ಪ್ರಯತ್ನ ಮಾಡಲಿ. ರಾಜ್ಯದ ಜನತೆ ನಿರೀಕ್ಷಿಸುತ್ತಿದ್ದಾರೆ ಎಂದು ಕೆ. ಅಶ್ರಫ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)