ನವದೆಹಲಿ: ಪತ್ರಕರ್ತ ಸಿದ್ದಿಕ್ ಕಾಪ್ಪನ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಿರೋಧಿಸಿ ಯು.ಪಿ. ಪೊಲೀಸರು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ ಅಫಿದಾವತ್ ನಲ್ಲಿ ಪ್ರಸ್ತಾಪಿಸಿರುವ ಸಮಜಾಯಿಷಿಗಳು ಅಸಂಬದ್ದವಾಗಿವೆ ಮತ್ತು ಇದು ಸುಪ್ರೀಂ ಕೋರ್ಟ್ ನ ಹಾದಿ ತಪ್ಪಿಸುವ ಪ್ರಯತ್ನವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಅನಿಸ್ ಅಹ್ಮದ್ ಅವರು ತನ್ನ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರ ಆರೋಪಗಳನ್ನು ಅವರು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.
“ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ತಳೆದಿರುವ ನಿಲುವು ಅವರು ಏನೆಂಬುದನ್ನು ಬಹಿರಂಗಗೊಳಿಸಿದೆ. ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಉಂಟಾದ ಜನಾಕ್ರೋಶವನ್ನು ತಣಿಸಲು ವಿಚಾರಣೆಯ ದಿಕ್ಕನ್ನೇ ಬದಲಿಸಲಾಯಿತು. ಉ.ಪ್ರ. ಎಸ್.ಟಿ.ಎಫ್. ಅಮಾಯಕ ವಿದ್ಯಾರ್ಥಿಗಳು ಮತ್ತು ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರನ್ನು ಹರಕೆಯ ಕುರಿಗಳಾಗಿ ಹೇಗೆ ಬಳಸಿಕೊಂಡಿತು ಮತ್ತು ಅಧಿಕಾರಿಗಳು ಅದನ್ನು ನಿಭಾಯಿಸಿದ ಭಯಾನಕ ರೀತಿಯು ಈಗ ಇಡೀ ಜಗತ್ತಿಗೆ ತಿಳಿದಿದೆ ಎಂದು ಅನೀಸ್ ಅಹ್ಮದ್ ವಿವರಿಸಿದ್ದಾರೆ.
ಪಾಪ್ಯುಲರ್ ಫ್ರಂಟ್ ಒಂದು ಕಾನೂನು ಬದ್ಧ ಮತ್ತು ಪ್ರಜಾಸತ್ತಾತ್ಮಕವಾಗಿ ಕಾರ್ಯ ನಿರ್ವಹಿಸುವ ಸಂಘಟನೆಯಾಗಿದೆ. ಅದರೊಂದಿಗೆ ಬೆರೆಯುವುದು ಅಪರಾಧವಲ್ಲ. ಅಮಾಯಕರ ನ್ಯಾಯವನ್ನು ತಡೆ ಹಿಡಿಯುವ ಪ್ರಯತ್ನದ ಭಾಗವಾಗಿ ಯು.ಪಿ. ಪೊಲೀಸರು ಪಾಪ್ಯುಲರ್ ಫ್ರಂಟ್ ಅನ್ನು ಭಯೋತ್ಪಾದನೆಯ ನಂಟು ಹೊಂದಿರುವ ಸಂಘಟನೆ ಎಂದು ಬಿಂಬಿಸುತ್ತಿದ್ದಾರೆ. ಪೊಲೀಸರು ದಾಖಲಿಸಿರುವ ಪ್ರಕರಣವು ಎಷ್ಟು ಆಧಾರರಹಿತವಾಗಿದೆ ಹಾಗೂ ಯುಪಿ ಪೊಲೀಸರು ಪುರಾವೆಗಳನ್ನು ಒದಗಿಸುವಲ್ಲಿ ಎಷ್ಟು ವಿಫಲಗೊಂಡು ಹತಾಶರಾಗಿದ್ದಾರೆ ಎಂಬುದನ್ನು ಇದು ಸ್ಪಷ್ಟಪಡಿಸುತ್ತಿದೆ. ಈ ನಿರಪರಾಧಿಗಳು ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿರುವುದು ಯುಪಿ ಪೊಲೀಸರು ಹೆಣೆದಿರುವ ಕಟ್ಟುಕಥೆಯಲ್ಲಿ ಸ್ವಲ್ಪವಾದರೂ ಸತ್ಯವಿರುವ ಸಂಶಯಕ್ಕಲ್ಲ; ಬದಲಾಗಿ ಅವರ ಮೇಲೆ ಹೇರಲಾಗಿರುವ ಕರಾಳ ಕಾಯ್ದೆಯಿಂದಾಗಿದೆ.
ಯುಪಿ ಪೊಲೀಸರ ಸುಳ್ಳನ್ನು ಸರ್ವೋಚ್ಛ ನ್ಯಾಯಾಲಯವು ವಿಫಲಗೊಳಿಸಲಿದೆ ಹಾಗೂ ಸಿದ್ದಿಕ್ ಕಾಪ್ಪನ್ ಮತ್ತು ಹತ್ರಾಸ್ ಪ್ರಕರಣದಲ್ಲಿ ಸಿಲುಕಿಸಲಾದ ಇತರ ಅಮಾಯಕರ ಅಕ್ರಮ ಜೈಲುಶಿಕ್ಷೆಯನ್ನು ಕೊನೆಗೊಳಿಸುತ್ತದೆ ಎಂದು ಪಾಪ್ಯುಲರ್ ಫ್ರಂಟ್ ನಿರೀಕ್ಷಿಸುತ್ತದೆ ಎಂದು ಅನೀಸ್ ಅಹ್ಮದ್ ಆಶಾವಾದ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ