#ಸ್ನೇಹಜೀವಿ ಅಡ್ಕ
ಬೆಳಿಗ್ಗೆ ಮದ್ರಸ ಬಿಟ್ಟು ಮನೆಯ ಕಡೆ ಹೊರಟ ಸುಳ್ಯ ಸಮೀಪದ ಅರಂಬೂರು ನ ಆಯಿಷಾ ರಿಫಾ ಎಂಬ ಆರರ ಹರೆಯದ ಪುಟ್ಟ ಪುಟಾಣಿಯೊಂದು ರಸ್ತೆ ದಾಟುವ ಧಾವಂತದಲ್ಲಿ ಬೈಕ್ ಅಪಘಾತಕ್ಕೊಳಗಾಗಿ ಈ ಲೋಕದಿಂದ ಮರೆಯಾದಳು ಇನ್ನಾಲಿಲ್ಲಾಹಿ ವ ಇನ್ನಾ ಇಲೈಹಿ ರಾಜಿವೂನ್.
ಏನೂ ಅರಿಯದ ಆ ಮಗ್ಧ ಕಂದಮ್ಮಳನ್ನು ಕಳೆದುಕೊಂಡ ದುಃಖ ಸಹಿಸಲಾಗದೆ ಇಡೀ ಊರೇ ಕಂಬನಿ ಮಿಡಿಯಿತು.
ಅವಳಿ ಮಕ್ಕಳ ಪೈಕಿ ಒಬ್ಬಳನ್ನು ಕಳೆದುಕೊಂಡ ಆ ಹೆತ್ತ ಜೀವದ ನೋವು, ಆರ್ತನಾದಗಳು ಊಹಿಸಲಸಾಧ್ಯ. ಕಣ್ಣೀರಧಾರೆಯೊಂದಿಗೆ ಮೊಗರ್ಪಣೆ ಮಸೀದಿಯ ದಫನ ಭೂಮಿಯಲ್ಲಿ ರಿಫಾಳನ್ನು ಅಂತಿಮವಾಗಿ ಬೀಳ್ಕೊಡಲಾಯಿತು.
ಮರಣಕ್ಕೆ ಹೇಳಲು ನೂರಾರು ಕಾರಣಗಳು ಇರಬಹುದು.
ಇತ್ತೀಚೆಗೆ ಕೇರಳದ ಪೊಲೀಸ್ ಸಬ್ ಇನ್ಸ್ಪೆಕ್ಟರೊಬ್ಬರ ಪ್ರಸಂಗವೊಂದು ವ್ಯಾಪಕವಾಗಿ ವೈರಲಾಗಿತ್ತು.
ಬೆಳಗ್ಗಿನ ರೌಂಡ್ಸ್ ಹೊರಟ ಪೊಲೀಸರ ಜೀಪ್ ನ ಮುಂದೆ ಮದ್ರಸಾಗೆ ಹೋಗುವ ಪುಟ್ಟ ಪುಟಾಣಿಯೊಂದು ಬರುತ್ತಿರುವುದನ್ನು ಗಮನಿಸಿ, ಜೀಪ್ ನಿಲ್ಲಿಸಿ ವಿಚಾರಿಸುವಾಗ ಆ ಮಗು ನಿದ್ದೆ ಕಣ್ಣಿನಲ್ಲೇ ಇತ್ತು.
ಆ ಸಣ್ಣ ಪ್ರಾಯದ ಮದ್ರಸಕ್ಕೆ ಬರುವ ಪುಟಾಣಿಯನ್ನು ಕರೆದುಕೊಂಡು ಅವರ ಮನೆಗೆ ಹೋಗಿ ಬಾಗಿಲು ತಟ್ಟಿ ಮಕ್ಕಳನ್ನು ಮದ್ರಸಾಗೆ ಕಳುಹಿಸುವಾಗ ಜಾಗೃತೆ ವಹಿಸಬಾರದೇ ಅಂತ ಕೇಳುವಾಗ ಮಗುವಿನ ತಾಯಿ ಹೇಳಿದ ಉತ್ತರ “ಮಗುವನ್ನು ದೇವನು ನೋಡುತ್ತಾನೆ ” ಎಂಬುದಾಗಿತ್ತಂತೆ!
ಬಹಳಷ್ಟು ಹೆತ್ತವರ ಪರಿಸ್ಥಿತಿಗಳೂ ಇದೇ ರೀತಿಯಾಗಿದೆ.
ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ನೀಟಾಗಿ ವಸ್ತ್ರ ಧರಿಸಿ ಕಳುಹಿಸುವ ಹೆತ್ತವರು, ಮದ್ರಸಾಗೆ ಕಳುಹಿಸುವಾಗ ಮಾತ್ರ ಬೇಕಾಬಿಟ್ಟಿಯಾಗಿ ಕಳುಹಿಸಿ ಕೊಡುವುದು ಬಹಳಷ್ಟು ಕಡೆ ನಡೆಯುತ್ತದೆ.
ಬೆಳಗೆದ್ದು ಮುಖ ತೊಳೆಯದೆ ಹಾಗೇ ಮದ್ರಸಾಗಳಿಗೆ ಬರುವಂತಹ ವಿದ್ಯಾರ್ಥಿಗಳೂ ಕೂಡ ಇದ್ದಾರೆ.
ಮದ್ರಸಾ ಅಂದರೆ ಹೇಗೂ ನಡೆಯುತ್ತದೆ ಎನ್ನುವಂತಹ ತಾತ್ಸಾರ ಭಾವನೆಗಳೇ ಇದಕ್ಕೆಲ್ಲ ಕಾರಣವಾಗಿದೆ.
ರಾಜ್ಯ ಹೆದ್ದಾರಿಗಳ ಬದಿಗಳಲ್ಲಿ ಇರುವ ಮದ್ರಸಾಗಳಿಗೆ ಬರುವ ಮಕ್ಕಳನ್ನು ಹೆಚ್ಚಾಗಿ ಜಾಗೃತೆವಹಿಸಬೇಕಾದ ಅನಿವಾರ್ಯತೆಯಿದೆ.
ರಸ್ತೆ ದಾಟುವಾಗ ಮಕ್ಕಳಿಗೆ ಎರಡು ಕಡೆ ಗಮನಹರಿಸುವುದು ಕಷ್ಟವಾಗಬಹುದು ಆದುದರಿಂದ ಹೆತ್ತವರು ಮಕ್ಕಳನ್ನು ಮದ್ರಸಾಗಳಿಗೆ ತಲುಪಿಸಿ, ಕರೆದುಕೊಂಡು ಬರುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಗಿದೆ.
ಇನ್ನಿತರ ವಾಹನಗಳಲ್ಲಿ ಕಳುಹಿಸುವಾಗಲೂ ಮಕ್ಕಳನ್ನು ರಸ್ತೆ ದಾಟಿಸಿದ ನಂತರವೇ ಚಾಲಕರು ಹೊರಡಬೇಕಿದೆ.
ನಮ್ಮ ಕೆಲವೊಂದು ನಿರ್ಲಕ್ಷ್ಯಗಳು ಕೂಡ ಜೀವನಪೂರ್ತಿ ನಮ್ಮನ್ನು ಕಣ್ಣೀರಲ್ಲಾಗಿಸಬಹುದು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ