ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಸುರತ್ಕಲ್ ನ ಫಾಝಿಲ್ ಮತ್ತು ಸುಳ್ಯದ ಮಸೂದ್ ವಿಷಯದಲ್ಲಿ ಪ್ರಸ್ತುತ ಸರಕಾರ ತಾರತಮ್ಯ ಪ್ರದರ್ಶಿಸಿದ ಬಗ್ಗೆ ಮತ್ತು ಸಂಬಂಧಿತ ಇತರ ವಿಷಯಗಳ ಬಗ್ಗೆ ಸುರತ್ಕಲ್ ನ ಮುಸ್ಲಿಮ್ ಐಕ್ಯತಾ ವೇದಿಕೆ ನಿಯೋಗವು ,ಶ್ರೀ ಯು. ಟಿ.ಖಾದರ್ ನೇತೃತ್ವದಲ್ಲಿ ಕರ್ನಾಟಕ ಸರಕಾರದ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ಧರಾಮಯ್ಯರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಸುರತ್ಕಲ್ ಫಾಝಿಲ್ ಮತ್ತು ಸುಳ್ಯದ ಮಸೂದ್ ಹತ್ಯಾ ಘಟನೆ ಮತ್ತು ನಂತರದ ಬೆಳೆವಣಿಗೆಗಳಲ್ಲಿ ಪ್ರಸ್ತುತ ಸರಕಾರ ಮತೀಯ ತಾರತಮ್ಯ ಪ್ರದರ್ಶಿಸಿದ ಬಗ್ಗೆ ಮತ್ತು ಘಟನೆಯನ್ನು ನಿರ್ಲಕ್ಷಿಸಿದ ಬಗ್ಗೆ ದ್ವನಿ ಎತ್ತಲು ಮತ್ತು ನ್ಯಾಯ ಖಾತರಿ ಪಡಿಸಲು ಪ್ರಯತ್ನಿಸಲು ಕೋರಿ ವಿಸ್ತೃತ ಮನವಿಯನ್ನು ಸಲ್ಲಿಸಲಾಗಿದೆ.
ನಿಯೋಗದಲ್ಲಿ ಮುಸ್ಲಿಮ್ ಐಕ್ಯತಾ ವೇದಿಕೆ ಅಧ್ಯಕ್ಷರಾದ ಅಶ್ರಫ್ ಬದ್ರಿಯಾ, ಮೃತ ಫಾಝಿಲ್ ತಂದೆ ಉಮರ್ ಫಾರೂಕ್, ಮುಸ್ಲಿಮ್ ಒಕ್ಕೂಟ ಅಧ್ಯಕ್ಷರಾದ ಕೆ.ಅಶ್ರಫ್, ವೇದಿಕೆ ಸದಸ್ಯರಾದ ಅಬೂಬಕ್ಕರ್ ಕುಳಾಯಿ, ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಬದಲ್ಲಿ ಮಾನ್ಯ ಸಿದ್ದರಾಮಯ್ಯ ರವರು ಈ ಬಗ್ಗೆ ಪರಿಶೀಲಿಸಿ ಸದನದಲ್ಲಿ ದ್ವನಿ ಎತ್ತುವ ಬಗ್ಗೆ ಭರವಸೆ ನೀಡಿದರು. ಸಂತ್ರಸ್ತರಿಗೆ ತಮ್ಮ ಹಂತದಲ್ಲಿ ಸಾಧ್ಯವಾಗುವ ಸರ್ವ ನೆರವು ನೀಡುವ ಬಗ್ಗೆ ಮಾನ್ಯ ಯು.ಟಿ.ಖಾದರ್ ಕೂಡಾ ಈ ಸಂದರ್ಬದಲ್ಲಿ ಭರವಸೆ ನೀಡಿದರು. ನಿಯೋಗವು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ. ಬಿ.ಕೆ.ಹರಿಪ್ರಸಾದ್, ಡಿ.ಕೆ.ಶಿವಕುಮಾರ್, ಜೇ.ಡಿ.ಎಸ್.ನಾಯಕರಾದ ಎಚ್.ಡಿ.ಕುಮಾರ ಸ್ವಾಮಿ, ಶಾಸಕರಾದ ಬಿ. ಎಂ.ಫಾರೂಕ್, ಬಿ.ಝಡ್.ಝಮೀರ್ ಅಹ್ಮದ್ ಖಾನ್, ಶ್ರೀ ರಮೇಶ್ ಕುಮಾರ್ ಮತ್ತು ಪ್ರಿಯಾಂಕ ಖರ್ಗೆ ರವರನ್ನು ಭೇಟಿ ಮಾಡಿ ಈ ವಿಷಯದಲ್ಲಿ ಚರ್ಚೆ ನಡೆಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ